ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಸಾವು

Prasthutha|

ರಾಯಚೂರು: ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸಗೂರು ತಾಲೂಕಿನ ಕಿಲ್ಲಾರಹಟ್ಟಿ ಗ್ರಾಮದಲ್ಲಿ ನಡೆದಿದೆ.

- Advertisement -

ಕಿಲ್ಲಾರಹಟ್ಟಿ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಮಲ್ಲಿಕಾರ್ಜುನ (13) ಮೃತ ದುರ್ದೈವಿಯಾಗಿದ್ದು. ಈತ ಶಾಲಾ ಆವರಣದಲ್ಲಿ ಕ್ರಿಕೆಟ್ ಆಡುವಾಗ ಚೆಂಡು ತರಲು ಹೋಗಿ, ನಿರ್ಮಾಣ ಹಂತದಲ್ಲಿರುವ ಬಿಸಿಯೂಟದ ಕೋಣೆಯ ಮೇಲಿನ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಮೃತ ಬಾಲಕನಿಗೆ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಸಂತಾಪ ಸೂಚಿಸಿದ್ದಾರೆ.

- Advertisement -

ಈ ಕುರಿತು ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



Join Whatsapp