ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಜೀಪ್ : ಪ್ರಯಾಣಿಕರು ಸೇಫ್

Prasthutha|

ಕುಶಾಲನಗರ: ಚಾಲಕನ ನಿಯಂತ್ರಣ ತಪ್ಪಿದ ಜೀಪ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಮಗುಚಿ ಬಿದ್ದಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಹುಣಸವಾಡಿ ಬಳಿ ನಡೆದಿದೆ.

- Advertisement -

ಮೈಸೂರು ಕಡೆಯಿಂದ ಕುಶಾಲನಗರ ಕಡೆಗೆ ಬರುತ್ತಿದ್ದ ಮಹೇಂದ್ರ ಥಾರ್ ಜೀಪ್ ವೇಗದ ಚಾಲನೆಯಿಂದ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಪರಿಣಾಮ  ಜಖಂಗೊಂಡಿದೆ. ಅದೃಷ್ಟವಶಾತ್ ಜೀಪ್ ನಲ್ಲಿ ಪ್ರಯಾಣಿಸುತ್ತಿದ್ದ ಚಾಲಕ ಯಶ್ವಂತ್ ಸೇರಿ ಮತ್ತೊಬ್ಬ ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.



Join Whatsapp