ಬಂಧನಕ್ಕೊಳಪಟ್ಟ ಪಾರ್ಥ ಚಟರ್ಜಿಗೆ ದೀದಿ ಶಾಕ್: ಸಚಿವ ಸ್ಥಾನದಿಂದ ವಜಾ ಮಾಡಿ ಆದೇಶ

Prasthutha|

ಕೋಲ್ಕತ್ತಾ: ಶಿಕ್ಷಕರ ನೇಮಕಾತಿಯಲ್ಲಿ ಹಗರಣದಲ್ಲಿ ಬಂಧನಕ್ಕೊಳಪಟ್ಟ ಪಶ್ಚಿಮ ಬಂಗಾಳದ ಪಾರ್ಥ ಚಟರ್ಜಿಯನ್ನು ಸಿಎಂ ಮಮತಾ ಬ್ಯಾನರ್ಜಿ ಸಚಿವ ಸ್ಥಾನದಿಂದ ವಜಾ ಮಾಡಿದ್ದಾರೆ. ಅವರ ಆಪ್ತೆಯ ಮನೆಯಲ್ಲಿ ಕೋಟ್ಯಂತರ ರೂ. ನಗದು ಪತ್ತೆಯಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

- Advertisement -

ಇದೀಗ ಅವರನ್ನ ಸಚಿವ ಸ್ಥಾನದಿಂದ ತೆಗೆದು ಹಾಕಿದ್ದೇನೆ. ತಪ್ಪಿತಸ್ಥರ ವಿರುದ್ಧ ನನ್ನ ಪಕ್ಷ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ಮಮತಾ ಬ್ಯಾನರ್ಜಿ ಗುರುವಾರ ಪ್ರಕಟಿಸಿದ್ದಾರೆ.

ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಸಂಪುಟದಲ್ಲಿ ಪಾರ್ಥ ಚಟರ್ಜಿ ಕೈಗಾರಿಕೆ ಮತ್ತು ವಾಣಿಜ್ಯ ಸಚಿವರಾಗಿದ್ದರು.



Join Whatsapp