ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ: ಇಬ್ಬರು ಆರೋಪಿಗಳು ಪೊಲೀಸ್ ಕಸ್ಟಡಿಗೆ

Prasthutha|

ಪುತ್ತೂರು: ಇತ್ತೀಚೆಗೆ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಎಂಬಾತನ ಹತ್ಯೆಗೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳಿಬ್ಬರನ್ನು ಪುತ್ತೂರು ನ್ಯಾಯಾಲಯ 5 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

- Advertisement -

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆಗೆ ಸಹಕಾರ ನೀಡಿದ ಆರೋದಲ್ಲಿ ಸವಣೂರಿನ ಮುಹಮ್ಮದ್ ಝಾಕೀರ್ ಮತ್ತು ಬೆಳ್ಳಾರೆಯ ಶಫೀಕ್ ಎಂಬಿಬ್ಬರನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದರು. ಆ ಬಳಿಕ ಬಂಧಿತರನ್ನು ನ್ಯಾಯಾಧೀಶರು ಮತ್ತು ಹೆಚ್ಚುವರಿ ನ್ಯಾಯಿಕ ದಂಡಾಧಿಕಾರಿಗಳ ಮುಂದೆ ಹಾಜರುಪಡಿಸಲಾಗಿತ್ತು.

ಈ ಮಧ್ಯೆ ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶ ಗೌಡ ಆರ್.ಪಿ ಅವರು ಆದೇಶ ನೀಡಿದ್ದರು. ಸದ್ಯ ಪ್ರಕರಣದ ಕುರಿತು ಆರೋಪಿಗಳನ್ನು ಹೆಚ್ಚಿನ ತನಿಖೆಗೊಳಿಸಬೇಕಾಗಿರುವುದರಿಂದ ತನ್ನ ಕಸ್ಟಡಿಗೆ ಒಪ್ಪಿಸುವಂತೆ ಬೆಳ್ಳಾರೆ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದನ್ನು ಪರಿಗಣಿಸಿದ ನ್ಯಾಯಾಲಯ ಇಬ್ಬರು ಆರೋಪಿಗಳನ್ನು 5 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.



Join Whatsapp