2023 ಕರ್ನಾಟಕ ವಿಧಾನಸಭಾ ಚುನಾವಣೆ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿ ಡಾ.ಜಿ.ಪರಮೇಶ್ವರ ನೇಮಕ

Prasthutha|

ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ  ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯನ್ನು  ರೂಪಿಸಲು ‘ಪ್ರಣಾಳಿಕೆ ಹಾಗೂ ನೀತಿ ನಿರೂಪಣೆ’ ಸಮಿತಿಯ ಅಧ್ಯಕ್ಷರನ್ನಾಗಿ ಶಾಸಕ ಡಾ.ಜಿ.ಪರಮೇಶ್ವರ ಅವರನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇಮಕ ಮಾಡಿದ್ದಾರೆ.

- Advertisement -

2023ರ ಮೇ ತಿಂಗಳ ಒಳಗೆ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದಕ್ಕಾಗಿ  ಸಿದ್ಧತೆ ಆರಂಭಿಸಿರುವ ಪ್ರತಿಪಕ್ಷ ಕಾಂಗ್ರೆಸ್ ಗೆ ಚುನಾವಣಾ ಪ್ರಣಾಳಿಕೆ ಸಮಿತಿಯನ್ನು ನೇಮಕ ಮಾಡಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಆದೇಶಹೊರಡಿಸಿದ್ದರು. ಅದರ ಭಾಗವಾಗಿ ಪ್ರಣಾಳಿಕೆ ಸಮಿತಿ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.

ಸಮಿತಿಯ ಉಪಾಧ್ಯಕ್ಷರನ್ನಾಗಿ ಮಧು ಬಂಗಾರಪ್ಪ ಹಾಗೂ ಪ್ರೊ.ಕೆ.ಇ.ರಾಧಾಕೃಷ್ಣ ಅವರನ್ನು ನೇಮಿಸಲಾಗಿದೆ ಎಂದು ಪ್ರಕಟಣೆಯಲ್ಲಿ  ತಿಳಿಸಿದೆ. 

- Advertisement -

ಮೂರು ತಿಂಗಳಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಚರ್ಚಿಸಿ ಕರಡು ಪ್ರಣಾಳಿಕೆಯನ್ನು ಸಮಿತಿ ಹೊರತರಲಿದೆ ಎಂದು ಪರಮೇಶ್ವರ ಹೇಳಿದರು.



Join Whatsapp