ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಸಾಮೂಹಿಕ ನಾಯಕತ್ವದ ಮಂತ್ರ ಜಪಿಸಿದ ಡಿಕೆ ಶಿವಕುಮಾರ್

Prasthutha|

ದಾವಣೆಗೆರೆ: ಸಿದ್ದರಾಮಯ್ಯರ 75ನೇ ಜನ್ಮದಿನದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮುಂದಿನ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸೋಣ ಎಂದು ಕರೆ ನೀಡಿದ್ದಾರೆ.

- Advertisement -

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು. ಇದು ನಮ್ಮೆಲ್ಲರ ಸಂಕಲ್ಪವಾಗಬೇಕು. ಸಿದ್ದರಾಮಯ್ಯ ಕೇವಲ ಹಿಂದುಳಿದ ವರ್ಗಗಳ ನಾಯಕರಲ್ಲ. ಸರ್ವ ಜನಾಂಗಕ್ಕೂ, ಸರ್ವ ಧರ್ಮಕ್ಕೂ ಸಿದ್ದರಾಮಯ್ಯ ನಾಯಕ. ರಾಜ್ಯದ ಸೇವೆ ಮಾಡಲು ಸಿದ್ದರಾಮಯ್ಯಗೆ ದೇವರು ಶಕ್ತಿ ನೀಡಲಿ. ಸಿದ್ದರಾಮಯ್ಯ ಮುಂದಾಳತ್ವದಲ್ಲಿ ಒಟ್ಟಾಗಿ ಕೆಲಸ ಮಾಡೋಣ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಯನ್ನು ಎದುರಿಸೋಣ. ಸಿದ್ದರಾಮಯ್ಯ ಮುಂದಾಳತ್ವದಲ್ಲಿ ಒಟ್ಟಾಗಿ ಕೆಲಸ ಮಾಡೋಣ ಎಂದರು.



Join Whatsapp