ಅಮಿತ್ ಶಾ ಭೇಟಿಯಾದ ನಳಿನ್ ಕುಮಾರ್ ಕಟೀಲ್: ಪ್ರವೀಣ್ ಹತ್ಯೆ ಪ್ರಕರಣದ ತನಿಖೆಯಲ್ಲಿ ವಿಶೇಷ ಕಾಳಜಿ ವಹಿಸಲು ಮನವಿ

Prasthutha|

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಇಂದು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.

- Advertisement -

ಇತ್ತೀಚೆಗೆ ಹತ್ಯೆಗೊಳಗಾದ ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಪ್ರಕರಣದ ತನಿಖೆಯನ್ನು ಎನ್.ಐ.ಎಗೆ ಒಪ್ಪಿಸಿರುವುದಕ್ಕೆ ಅವರು ಧನ್ಯವಾದ ಸಮರ್ಪಿಸಿದರು. ಅಲ್ಲದೆ, ಈ ಪ್ರಕರಣದ ತನಿಖೆಯಲ್ಲಿ ವಿಶೇಷ ಕಾಳಜಿ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸುವಂತೆ ನಳಿನ್ ಕುಮಾರ್ ಕಟೀಲ್ ವಿನಂತಿಸಿದರು.  

ಈ ಸಂದರ್ಭದಲ್ಲಿ ಗೃಹ ಸಚಿವರು ರಾಜ್ಯದಲ್ಲಿ ಎನ್.ಐ.ಎಗೆ ವಹಿಸಿರುವ ಪ್ರಕರಣಗಳ ತನಿಖೆಯನ್ನು ಶೀಘ್ರವಾಗಿ ಕೈಗೊಂಡು ಅಪರಾಧ ಕೃತ್ಯ ಎಸಗುವವರಿಗೆ ಕಠಿಣ ಕ್ರಮಗಳನ್ನು ನೀಡಲಾಗುವುದು ಮತ್ತು ಎನ್.ಐ.ಎ ಅಧಿಕಾರಿಗಳಿಗೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚಿಸುವುದಾಗಿ ಭರವಸೆ ನೀಡಿದ್ದಾರೆ.



Join Whatsapp