ಇತಿಹಾಸವೇ ಗೊತ್ತಿಲ್ಲದ ಬಿಜೆಪಿಯದ್ದು ನಕಲಿ ದೇಶಭಕ್ತಿ: ಸಿದ್ದರಾಮಯ್ಯ

Prasthutha|

ಬೆಂಗಳೂರು: ಸಾವರ್ಕರ್ ಫ್ಲೆಕ್ಸ್ ಅಳವಡಿಕೆ ವಿಚಾರವಾಗಿ ಶಿವಮೊಗ್ಗದಲ್ಲಿ ನೆಡದ ಘಟನೆಯಲ್ಲಿ ಎಸ್‌ಡಿಪಿಐ ಕೈವಾಡದ ಬಗ್ಗೆ ಬಿಜೆಪಿಗರ ಬಳಿ ದಾಖಲೆ ಇದ್ದರೆ ಕ್ರಮ ತೆಗೆದುಕೊಳ್ಳಲಿ ಎಂದು ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ತಪ್ಪು ಮಾಡಿ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುತ್ತಾರೆ. ಬಿಜೆಪಿಗೆ ಕಾಮಾಲೆ ರೋಗ ಬಂದಿದೆ. ಸುಳ್ಳು ಹೇಳುವುದೂ, ಹಬ್ಬಿಸುವುದೂ ಇವರೇ. ಶಿವಮೊಗ್ಗದಲ್ಲಿ ಮುಸ್ಲಿಮರಿರುವ ಪ್ರದೇಶದಲ್ಲಿ ಸಾವರ್ಕರ್ ಭಾವಚಿತ್ರ ಹಾಕಿ, ಟಿಪ್ಪು ಭಾವಚಿತ್ರ ತೆಗೆದಿದ್ದಾರೆ. ಹೀಗೆ ಮಾಡಿದರೆ ಗಲಭೆ ಆಗುವುದಿಲ್ಲವೇ’ ಎಂದು ಪ್ರಶ್ನಿಸಿದರು.


‘ಮುಖ್ಯಮಂತ್ರಿ ಬೊಮ್ಮಾಯಿ ಆರ್‌ಎಸ್‌ಎಸ್ ನ ಕೈಗೊಂಬೆಯಾಗಿದ್ದಾರೆ. ಸಾವರ್ಕರ್ ಮುಚ್ಚಳಿಕೆ ಬರೆದು ಕೊಟ್ಟು ಬಂದ ಮೇಲೆ ಯಾವ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದರು. ಇತಿಹಾಸವೇ ಗೊತ್ತಿಲ್ಲದ ಬಿಜೆಪಿಯದ್ದು ನಕಲಿ ದೇಶಭಕ್ತಿ ಎಂದು ಟೀಕಿಸಿದರು.

- Advertisement -


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಲೆಯಾದ ಪ್ರವೀಣ್ ನೆಟ್ಟಾರು ಮನೆಗೆ ಮಾತ್ರ ಹೋಗಿರುವ ಮುಖ್ಯಮಂತ್ರಿ ಇನ್ನಿಬ್ಬರ ಮನೆಗೆ ಯಾಕೆ ಹೋಗಿಲ್ಲ. ಸರ್ಕಾರದ ದುಡ್ಡು ಅಲ್ಲವೇ? ತೆರಿಗೆ ಹಣ ಅಲ್ಲವೇ? ಮಸೂದ್, ಫಾಜಿಲ್ ಅವರಿಬ್ಬರಿಗೂ ಪರಿಹಾರ ಕೊಡಬೇಕಲ್ಲವೇ? ಇಬ್ಬಗೆಯ ರಾಜಕೀಯ ಮಾಡಬೇಡಿ’ ಎಂದು ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.



Join Whatsapp