ಕೊಡಗು: ಮಡಿಕೇರಿಯಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಬಿಜೆಪಿ ಕಾರ್ಯಕರ್ತರು

Prasthutha|

ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರಿಂದ ನಗರದಲ್ಲಿ ಪ್ರತಿಭಟನೆ

- Advertisement -

ಮಡಿಕೇರಿ: ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಕೊಡಗಿಗೆ ಆಗಮಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮಡಿಕೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದು ಕಪ್ಪು ಬಾವುಟ ಪ್ರದರ್ಶಿಸಿ, ಧಿಕ್ಕಾರ ಕೂಗಿದ್ದಾರೆ.

ಮಡಿಕೇರಿ ಜ.ತಿಮ್ಮಯ್ಯ ವೃತ್ತದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಪೊಲೀಸರು, ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ತಳ್ಳಾಟ, ನೂಕಾಟ ನಡೆದಿದೆ.

- Advertisement -

ಘಟನೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಸ್ಥಳದಲ್ಲೇ ಕುಳಿತು ಪ್ರತಿಭಟಿಸಿದರು. ಮಾಜಿ ಮುಖ್ಯ ಮಂತ್ರಿಗಳಿಗೆ ರಕ್ಷಣೆ ನೀಡುವಲ್ಲಿ ಕೊಡಗು ಪೊಲೀಸರು ವಿಫಲರಾಗಿದ್ದಾರೆ. ಪೊಲೀಸರು ಬಿಜೆಪಿಯ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದರು. ನಗರಕ್ಕೆ ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಎಂ.ಎ ಅಯ್ಯಪ್ಪ ಭೇಟಿ ನೀಡಿದ್ದಾರೆ.



Join Whatsapp