22ರಂದು ನಾಡದೋಣಿ ಎಂಜಿನ್ ತಪಾಸಣೆ

Prasthutha|

ಮಂಗಳೂರು: 2022-23ನೇ ಸಾಲಿಗೆ ಮೀನುಗಾರಿಕೆ ಉದ್ದೇಶಕ್ಕಾಗಿ ಬಳಸುವ ಸೀಮೆಎಣ್ಣೆಯ ಪರವಾನಿಗೆಯನ್ನು ನವೀಕರಿಸುವ ಹಿನ್ನೆಲೆಯಲ್ಲಿ ನಾಡದೋಣಿ ಎಂಜಿನ್ ತಪಾಸಣೆ ಆಗಸ್ಟ್ 22ರ ಸೋಮವಾರ ನಡೆಯಲಿದೆ.

- Advertisement -


ದೋಣಿ ಮಾಲಕರು ದೋಣಿಯ ನೋಂದಣಿ ಪತ್ರದ ಪ್ರತಿ, ಆಧಾರ್ ಪ್ರತಿ ಮತ್ತು ಮತದಾರರ ಗುರುತಿನ ಚೀಟಿ ಪ್ರತಿಯೊಂದಿಗೆ ತಮ್ಮ ಹತ್ತಿರದ ಸ್ಥಳಗಳಾದ ಉಳ್ಳಾಲ, ಸುಲ್ತಾನ್ ಬತ್ತೇರಿ, ತೋಟಬೇಂಗ್ರೆ, ಕಸಬಾಬೇಂಗ್ರೆ, ಬಂಗ್ರಕುಳೂರು, ಪಣಂಬೂರು, ಮೀನಕಳಿಯ, ಚಿತ್ರಾಪುರ, ಬೈಕಂಪಾಡಿ, ಕುಳಾಯಿ, ಹೊಸಬೆಟ್ಟು, ಸುರತ್ಕಲ್, ಗುಡ್ಡೆಕೊಪ್ಲ, ಸಸಿಹಿತ್ಲು ಮತ್ತು ಮುಕ್ಕದಲ್ಲಿ ದೋಣಿಯ ಎಂಜಿನನ್ನು ತಪಾಸಣೆ ಮಾಡಿಸುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Join Whatsapp