ಆರ್.ಎಸ್.ಎಸ್ ಮತ್ತು ಬಿಜೆಪಿಯ ಕಪಿಮುಷ್ಟಿಯಿಂದ ಕೊಡಗು ಜಿಲ್ಲೆಗೆ ಸ್ವಾತಂತ್ರ್ಯ ಸಿಗಬೇಕಾಗಿದೆ: ಮಿಥುನ್ ಗೌಡ

Prasthutha|

ಮಡಿಕೇರಿ: ಕೊಡಗು ಜಿಲ್ಲೆಗೆ ಆರ್.ಎಸ್.ಎಸ್ ಮತ್ತು ಬಿಜೆಪಿಯ ಕಪಿಮುಷ್ಟಿಯಿಂದ ಸ್ವಾತಂತ್ರ್ಯ ಸಿಗಬೇಕಾಗಿದೆ ಎಂದು ಕೊಡಗು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ಗೌಡ ಆಡಳಿತ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

- Advertisement -

ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಪೊಲೀಸರ ಕಣ್ಣೆದುರಿಗೆ ಮೊಟ್ಟೆ ಎಸೆದು ವಿಕೃತಿ ಮೆರೆದ ಆರ್.ಎಸ್.ಎಸ್ ಮತ್ತು ಬಿಜೆಪಿ ಕೃತ್ಯವನ್ನು ಖಂಡಿಸಿ ಹಾಗೂ ಪೊಲೀಸ್ ವೈಫಲ್ಯದ ವಿರುದ್ಧ ಆಗಸ್ಟ್ 26 ರಂದು ಮಡಿಕೇರಿ ಎಸ್.ಪಿ ಕಚೇರಿ ಚಲೋ ಹೋರಾಟವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ನಡುವೆ ಬಿಜೆಪಿ ಜನಜಾಗೃತಿ ಹೆಸರಿನಲ್ಲಿ ಸಮಾವೇಶ ನಡೆಸುವುದಾಗಿ ಹೇಳಿಕೆ ನೀಡಿ, ನಮ್ಮ ಹೋರಾಟವನ್ನು ಹತ್ತಿಕ್ಕಲು ಬಿಜೆಪಿ ಮುಂದಾಗಿದ್ದಾರೆ ಎಂದು ಆರೋಪಿಸಿದ ಅವರು, ನಾವು ಬಿಜೆಪಿಯ ಬೆದರಿಕೆಗೆ ಹೆದರುವವರಲ್ಲ, ಎಸ್.ಪಿ ಕಚೇರಿ ಚಲೋ ಹೋರಾಟವನ್ನು ಮಾಡುತ್ತೇವೆ ಎಂದರು.



Join Whatsapp