ಗೋ ರಕ್ಷಕರೆಂದು ಹೇಳಿಕೊಳ್ಳುವವರಿಂದ 35 ಎಕರೆ ಗೋಮಾಳ ಆರೆಸ್ಸೆಸ್ ಅಂಗ ಸಂಸ್ಥೆಗೆ ಮಂಜೂರು: ಕಾಂಗ್ರೆಸ್ ಕಿಡಿ

Prasthutha|

ಬೆಂಗಳೂರು: ಗೋ ರಕ್ಷಕರೆಂದು ಹೇಳಿಕೊಳ್ಳುವವರಿಂದ 35 ಎಕರೆ ಗೋಮಾಳ ಭೂಮಿ ಆರೆಸ್ಸೆಸ್ ಅಂಗ ಸಂಸ್ಥೆ ಜನಸೇವಾ ಟ್ರಸ್ಟ್ ಗೆ ಬಿಟ್ಟಿಯಾಗಿ ಮಂಜೂರಾತಿ. ಅಮೂಲ್ಯ ಭೂಮಿಯೆಂದು ತಿರಸ್ಕೃತಗೊಂಡಿದ್ದ ಮಂಜೂರಾತಿ ಯಾರ ‘ಕೈವಾಡ’ದಿಂದ ಮತ್ತೆ ಅನುಮೋದನೆಗೊಂಡಿತು?  ಕಂದಾಯ ಸಚಿವ ಆರ್. ಅಶೋಕ್ ಅವರಿಗೇಕೆ ಇದರಲ್ಲಿ ‘ವಿಶೇಷ’ ಆಸಕ್ತಿ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

- Advertisement -

ಮತ್ತೊಂದು ಟ್ವೀಟ್ ನಲ್ಲಿ, ಸಿಎಂ ಮಾತಿಗೇ ಗೌರವವಿಲ್ಲ, ಸಿಎಂ ಮಾತನ್ನು ಯಾರೂ ಕೇಳ್ತಿಲ್ಲ. ಬೊಮ್ಮಾಯಿ ಅವರೇ, ತಾವು ಕೇವಲ ಭ್ರಷ್ಟರ ಹಾಗೂ ಸಂಘಪರಿವಾರದ ಕೈಲಾಡುವ #PuppetCM ಮಾತ್ರವೇ? ಅಧಿಕಾರಿಗಳು ನಿಮ್ಮ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಕೊಡ್ತಿಲ್ಲ ಎಂದಾದರೆ ಸರ್ಕಾರ ಯಾರ ಹಿಡಿತದಲ್ಲಿದೆ? ನಿಮಗೂ ಮೀರಿ ಆಳುತ್ತಿರುವ ‘ಅಜ್ಞಾತ ಸಿಎಂ’ ಯಾರು? ಎಂದು ಪ್ರಶ್ನಿಸಿದೆ.



Join Whatsapp