ಹುಬ್ಬಳ್ಳಿ: ಈದ್ಗಾ-ಮೈದಾನದ ವಿವಾದ ಉಲ್ಬಣ, ತಮ್ಮ ಹಬ್ಬಗಳಿಗೂ ಅವಕಾಶ ಕಲ್ಪಿಸುವಂತೆ ಕ್ರಿಶ್ಚಿಯನ್ನರಿಂದ ಮನವಿ

Prasthutha|

ಹುಬ್ಬಳ್ಳಿ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹೈಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಕ್ರಿಶ್ಚಿಯನ್ ಸಮುದಾಯವು ತಮ್ಮ ಹಬ್ಬಗಳಿಗೂ ಈದ್ಗಾದಲ್ಲಿ ಅವಕಾಶ ಕಲ್ಪಿಸುವಂತೆ ಪೌರಾಯುಕ್ತರಿಗೆ ಮನವಿ ಮಾಡಿದೆ.

- Advertisement -

ಕ್ರಿಶ್ಚಿಯನ್ ಸಮುದಾಯವು ತಮ್ಮ ವಾರ್ಷಿಕ ಉತ್ಸವದ ಸಮಯದಲ್ಲಿ ಹುಬ್ಬಳ್ಳಿಯ ಈದ್ಗಾ ಮೈದಾನವನ್ನು ಸಹ ನೀಡಬೇಕೆಂದು ಒತ್ತಾಯಿಸಿ ಪೌರಾಯುಕ್ತರಿಗೆ ಮನವಿ ಪತ್ರವನ್ನು ಸಲ್ಲಿಸಿದೆ.

ಈ ಮಧ್ಯೆ, ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಿದ ಧಾರವಾಡ ಜಿಲ್ಲಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಅಂಜುಮನ್ ಇ ಇಸ್ಲಾಂ ಟ್ರಸ್ಟ್ ಹೈ ಕೋರ್ಟ್ ಮೊರೆ ಹೋಗಿತ್ತು. ಹೈಕೋರ್ಟ್, ಜಿಲ್ಲಾ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದೆ. ಇದನ್ನು ಪ್ರಶ್ನಿಸಿ ಟ್ರಸ್ಟ್ ಸುಪ್ರೀಂಕೋರ್ಟ್ ಮೊರೆ ಹೋಗಿದೆ.



Join Whatsapp