ಮಂಗಳೂರು: ನವ ವಿವಾಹಿತೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ

Prasthutha|

ಮಂಗಳೂರು: ನವ ವಿವಾಹಿತೆಯೋರ್ವಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆಯಲ್ಲಿ ನಡೆದಿದೆ.

- Advertisement -


ಅಂಬ್ಲಮೊಗರು ಗ್ರಾಮದ ಕೋಟ್ರಗುತ್ತು ನಿವಾಸಿ ರಶ್ಮಿ ವಿಶ್ವಕರ್ಮ (24) ಮೃತ ನವ ವಿವಾಹಿತೆ ಎಂದು ಗುರುತಿಸಲಾಗಿದೆ.


ಆಗಸ್ಟ್ 21 ರಂದು ರಶ್ಮಿಯನ್ನು ಗಂಜಿಮಠ ಮೂಲದ ಸಂದೀಪ್ ಎಂಬವರಿಗೆ ಮದುವೆ ಮಾಡಿ ಕೊಡಲಾಗಿತ್ತು. ಆದರೆ ಈ ಮದುವೆ ರಶ್ಮಿಗೆ ಇಷ್ಟವಿರಲಿಲ್ಲ ಎನ್ನಲಾಗಿದೆ. ಸೆ.3 ರಂದು ರಶ್ಮಿ ಇಲಿ ಪಾಷಾಣ ಸೇವಿಸಿದ್ದು, ಬಳಿಕ ಕುಟುಂಬದವರು ಅವರನ್ನು ಖಾಸಗಿ ಅಸ್ಪತ್ರೆಗೆ ದಾಖಲಿಸಿದ್ದರು, ಆದರೆ ಚಿಕಿತ್ಸೆ ಫಲಿಸದೇ ರಶ್ಮಿ ಇಂದು ಮೃತಪಟ್ಟಿದ್ದಾರೆ.

- Advertisement -


ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.




Join Whatsapp