ಮುರುಘಾ ಶ್ರೀ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

Prasthutha|

ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ ಬಂಧನವಾಗಿರುವ ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು ನಾಳೆಗೆ ಮುಂದೂಡಿದೆ. ನಾಳೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದೆ.

- Advertisement -

ಈ ವೇಳೆ ಸಂತ್ರಸ್ತೆಯರು ಕೋರ್ಟ್ ಹಾಜರಾಗಲಿದ್ದು, ಅವರ ಸಮ್ಮುಖದಲ್ಲೇ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
3ನೇ ಆರೋಪಿಯಾದ ಮಠದ ಉತ್ತರಾಧಿಕಾರಿ (ಬಸವಾದಿತ್ಯ), 4ನೇ ಆರೋಪಿಯಾದ ಮಠದ ಕಾರ್ಯದರ್ಶಿ ಪರಮಶಿವಯ್ಯ, 5ನೇ ಆರೋಪಿಯಾದ ವಕೀಲ ಗಂಗಾಧರಯ್ಯ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ನಾಳೆ ಆಕ್ಷೇಪಣೆ ಸಲ್ಲಿಕೆಗೆ ಕೋರ್ಟ್ ಸೂಚಿಸಿದೆ ಎಂದು ಸಂತ್ರಸ್ತೆಯರ ಪರ ವಕೀಲ ಶ್ರೀನಿವಾಸ್ ತಿಳಿಸಿದ್ದಾರೆ.



Join Whatsapp