ಕೊಡಗು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ವುಮೆನ್ ಇಂಡಿಯಾ ಮೂವ್ ಮೆಂಟ್ ಆಗ್ರಹ

Prasthutha|

ಮಡಿಕೇರಿ: ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕಂಬಿಬಾಣೆ ಗ್ರಾ.ಪಂ ವ್ಯಾಪ್ತಿಯ ಭೂತನಕಾಡಿನಲ್ಲಿ ನಡೆದಿದೆ. ಭೂತನಕಾಡಿನ ಅಲಿ ಹಾಗೂ ಬದ್ರನ್ನಿಸಾ ದಂಪತಿಗಳ ಎರಡನೇ ಪುತ್ರಿ ಅಫೀದಾ (19) ಆತ್ಮಹತ್ಯೆಗೆ ಶರಣಾದ ಯುವತಿ, ಮಡಿಕೇರಿಯ ಮಹಿಳಾ ಕಾಲೇಜಿನಲ್ಲಿ ಎರಡನೇ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ ಈಕೆ, ಕಾಲೇಜು ಮುಗಿಸಿ ಮನೆಗೆ ಬಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.

- Advertisement -

ಯುವತಿಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಯುವತಿಯ ತಂದೆ ಸುಂಟಿಕೊಪ್ಪ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆ ಪೊಲೀಸರು ಇಬ್ಬರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ಯುವತಿಯ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಕುಶಾಲನಗರ ಎಸ್.ಡಿ.ಪಿ.ಐ ಘಟಕ, ಸೋಷಿಯಲ್ ಡೆಮೋಕ್ರಾಟಿಕ್ ಟ್ರೇಡ್ ಯೂನಿಯನ್ ಮತ್ತು ವುಮೆನ್ ಇಂಡಿಯಾ ಮೂವ್ ಮೆಂಟ್ ಒತ್ತಾಯಿಸಿದೆ.



Join Whatsapp