ಚಿಕ್ಕಮಗಳೂರು: ಐಟಿ ಕಂಪನಿ ಉದ್ಯೋಗಿ ಅನುಮಾನಾಸ್ಪದ ಸಾವು

Prasthutha|

ಮೂಡಿಗೆರೆ: ಐಟಿ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉದ್ಯೋಗಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದ ಬೈರನಾಯಕನಹಳ್ಳಿಯಲ್ಲಿ ನಡೆದಿದೆ.

- Advertisement -


ಮೃತ ವ್ಯಕ್ತಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ಸಮೀಪದ ಸಂಸೆ ಮೂಲದ ಐಟಿ ಉದ್ಯೋಗಿ ಟಿ.ಸಾಗರ್‌ ಎಂದು ಗುರುತಿಸಲಾಗಿದೆ.


ಬೈರನಾಯಕಹಳ್ಳಿ ರೈಲು ರೈಲುಹಳಿಯಲ್ಲಿ ಸಾಗರ್‌ ಅವರ ಮೃತದೇಹ ಪತ್ತೆಯಾಗಿದ್ದು, ಸಮೀಪದಲ್ಲೇ ಅವರ ದ್ವಿಚಕ್ರ ವಾಹನವೂ ಕಂಡು ಬಂದಿದೆ. ಈ ಬಗ್ಗೆ ತ್ಯಾಮಗೊಂಡ್ಲು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -


ಮೃತ ಸಾಗರ್‌ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಪೊಲೀಸರ ತನಿಖೆಯ ಬಳಿಕ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಹೊರಬೀಳಲಿದೆ.



Join Whatsapp