ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ನಿಧನ; ಒಂದು ದಿನ ಶೋಕಾಚರಣೆ ಘೋಷಿಸಿದ ಭಾರತ

Prasthutha|

ನವದೆಹಲಿ: ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಅವರ ನಿಧನದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 11 ರಂದು ಭಾರತದಾದ್ಯಂತ ಒಂದು ದಿನದ ಶೋಕಾಚರಣೆ ನಡೆಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

- Advertisement -

ಬ್ರಿಟನ್ ಅನ್ನು ಸುದೀರ್ಘ ಕಾಲ ಆಳಿದ ರಾಣಿ ಎರಡನೇ ಎಲಿಜಬೆತ್ ತನ್ನ 96ನೇ ವಯಸ್ಸಿನಲ್ಲಿ ಸೆಪ್ಟೆಂಬರ್ 8 ರಂದು ನಿಧನರಾದರು. ಅಗಲಿದ ಗಣ್ಯರಿಗೆ ಗೌರವ ಸೂಚಕವಾಗಿ, ಭಾರತ ಸರ್ಕಾರವು ಸೆಪ್ಟೆಂಬರ್ 11 ರಂದು ಭಾರತದಾದ್ಯಂತ ಒಂದು ದಿನದ ಶೋಕಾಚರಣೆಯನ್ನು ನಡೆಸಲು ನಿರ್ಧರಿಸಿದೆ.

ಶೋಕಾಚರಣೆಯ ದಿನದಂದು, ರಾಷ್ಟ್ರಧ್ವಜವನ್ನು ನಿಯಮಿತವಾಗಿ ಹಾರಿಸುವ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಮತ್ತು ಆ ದಿನದಂದು ಯಾವುದೇ ಅಧಿಕೃತ ಮನರಂಜನೆ ಇರುವುದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.



Join Whatsapp