ರೀಲ್ಸ್ ಮಾಡಲು ಹೋದ ಯುವತಿ: ಕೆರೆಗೆ ಬಿದ್ದು ಮೃತ್ಯು

Prasthutha|

ಚಿಕ್ಕಬಳ್ಳಾಪುರ: ರೀಲ್ಸ್ ಮಾಡಲು ಹೋಗಿ ಯುವತಿಯೋರ್ವಳು ಕೆರೆಗೆ ಉರುಳಿ ಬಿದ್ದು ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದ ಗಂಗಾನಹಳ್ಳಿ ಗ್ರಾಮದ ಬಳಿ ನಡೆದಿದೆ.

- Advertisement -


ಗಾಜಿಲುವಾರುಪಲ್ಲಿ ಗ್ರಾಮದ ಎಂಎ ಪದವೀದರೆ ಅಮೃತ(22) ಮೃತ ಯುವತಿ ಎಂದು ತಿಳಿದು ಬಂದಿದೆ.


ನೆಂಟರ ಮನೆಯ ಗೃಹಪ್ರವೇಶದ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಯುವತಿ ಅಮೃತ, ಮತ್ತೋರ್ವ ಯುವತಿಯ ಜೊತೆ ಕೆರೆ ಬಳಿ ತೆರಳಿದ್ದಳು. ಈ ವೇಳೆ ಜೊತೆಯಲ್ಲಿದ್ದ ಯುವತಿಗೆ ವೀಡಿಯೋ ಮಾಡಲು ಹೇಳಿ ಮೊಬೈಲ್ ನೀಡಿ ಕೆರೆಯ ಅಂಚಿನ ದಿಂಡಿನ ಮೇಲೆ ತೆರಳಿದ್ದಳು. ಈ ವೇಳೆ ಅಮೃತಾ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಉರುಳಿಬಿದ್ದು ಸಾವನ್ನಪ್ಪಿದ್ದಾಳೆ.
ಈ ಬಗ್ಗೆ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp