ಕೂಳೂರು: ಪ್ರಧಾನಿ ಮೋದಿ ಭೇಟಿ ವೇಳೆ ಹಾಕಿದ ಡಾಂಬರಿಗೆ ಹತ್ತೇ ದಿನ ಆಯಸ್ಸು !

Prasthutha|

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಕೂಳೂರು ಸೇತುವೆ ಮೇಲಿನ ಗುಂಡಿಗಳನ್ನು ಮುಚ್ಚುವ ಸಲುವಾಗಿ ಹಾಕಿದ್ದ ಡಾಂಬರು ಹತ್ತೇ ದಿನಗಳಲ್ಲಿ ಕಿತ್ತುಹೋಗಿದೆ.

- Advertisement -


ನವಮಂಗಳೂರು ಬಂದರಿನಲ್ಲಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ಸೆ.2ರಂದು ನಗರಕ್ಕೆ ಭೇಟಿ ನೀಡಿದ್ದರು. ಮೋದಿ ಸಾಗುವ ರಸ್ತೆಯಲ್ಲಿದ್ದ ಗುಂಡಿಗಳನ್ನು ಕಾರ್ಯಕ್ರಮಕ್ಕೆ ತರಾತುರಿಯಲ್ಲಿ ಡಾಂಬರೀಕರಣ ಮಾಡಲಾಗಿತ್ತು. ಆದರೆ ಈ ಹೆದ್ದಾರಿಯಲ್ಲಿ ಮತ್ತೆ ಡಾಂಬರು ಕಿತ್ತು ಹೋಗಿ ಗುಂಡಿಗಳು ಕಾಣಿಸಿಕೊಂಡಿವೆ.


ಈ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಡಾಂಬರೀಕರಣ ನಡೆಸಿದ ಹತ್ತೇ ದಿನಗಳಲ್ಲೇ ಹೆದ್ದಾರಿಯಲ್ಲಿ ಮತ್ತೆ ಗುಂಡಿ ನಿರ್ಮಾಣವಾಗುವ ಮೂಲಕ ಈ ಕಾಮಗಾರಿಯ ಅಸಲಿಯತ್ತು ಬಯಲಾಗಿದೆ ಎಂದಿದ್ದಾರೆ. ಇದರಲ್ಲಿ ಕೂಡ 40% ಕಮಿಷನ್ ಇರಬಹುದು ಎಂದು ಟೀಕಿಸಿದ್ದಾರೆ.

- Advertisement -

ಪ್ರಧಾನಿ ಮೋದಿ ಬೆಂಗಳೂರು ಭೇಟಿಯ ವೇಳೆಯಲ್ಲಿಯೂ ಇದೇ ರೀತಿ ಸಂಭವಿಸಿತ್ತು. ಜನರು ಪ್ರಧಾನಿಗೆ ಟ್ವೀಟ್ ಮಾಡಿ ದೂರು ನೀಡಿದ್ದರು. ಈ ಬಗ್ಗೆ ತನಿಖೆಗೂ ಆದೇಶಿಸಲಾಗಿತ್ತು.



Join Whatsapp