ವಜಾ ಆದೇಶ ಜಾರಿಗೊಳಿಸಲು ಕೇಂದ್ರ ಸರ್ಕಾರಕ್ಕೆ ಅನುಮತಿ; ದೆಹಲಿ ಹೈಕೋರ್ಟ್ ವಿರುದ್ಧ ಸುಪ್ರೀಂ ಕೋರ್ಟ್ ಗೆ ಅರ್ಜಿ

Prasthutha|

ನವದೆಹಲಿ: 1986 ರ ಬ್ಯಾಚ್ ನ  ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಸತೀಶ್ ಚಂದ್ರ ವರ್ಮಾ ಅವರು ಈ ವರ್ಷದ ಆಗಸ್ಟ್ 30 ರಂದು ಶಿಸ್ತು ಸಮಿತಿಯು ಹೊರಡಿಸಿದ ವಜಾ ಆದೇಶವನ್ನು ಜಾರಿಗೆ ತರಲು ಕೇಂದ್ರ ಸರ್ಕಾರಕ್ಕೆ ಅನುಮತಿ ನೀಡಿದ ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

- Advertisement -

ಇಶ್ರತ್ ಜಹಾನ್ ನಕಲಿ ಎನ್ ಕೌಂಟರ್ ಪ್ರಕರಣದ ತನಿಖೆಯಲ್ಲಿ ಸಿಬಿಐ ತಂಡದಲ್ಲಿದ್ದ ಐಪಿಎಸ್ ಅಧಿಕಾರಿ ಸತೀಶ್ ಚಂದ್ರ ವರ್ಮಾ ಅವರ ನಿವೃತ್ತಿಗೆ ಒಂದು ತಿಂಗಳ ಮೊದಲು ಗೃಹ ಸಚಿವಾಲಯ ಅವರನ್ನು ವಜಾಗೊಳಿಸಿತ್ತು. ಆಗಸ್ಟ್ 30 ರಂದು ದೆಹಲಿ ಹೈಕೋರ್ಟ್ ನೀಡಿದ ಆದೇಶವನ್ನು ಮಾರ್ಪಡಿಸುವಂತೆ ಕೇಂದ್ರವು ಕೋರಿತ್ತು.



Join Whatsapp