Home ಟಾಪ್ ಸುದ್ದಿಗಳು ಭ್ರಷ್ಟಾಚಾರ ಪ್ರಕರಣ; ಲಾಲು ಪ್ರಸಾದ್ ಯಾದವ್ ಗೆ ಸಂಬಂಧಿಸಿದ 15 ಸ್ಥಳಗಳಲ್ಲಿ ಸಿಬಿಐ ದಾಳಿ

ಭ್ರಷ್ಟಾಚಾರ ಪ್ರಕರಣ; ಲಾಲು ಪ್ರಸಾದ್ ಯಾದವ್ ಗೆ ಸಂಬಂಧಿಸಿದ 15 ಸ್ಥಳಗಳಲ್ಲಿ ಸಿಬಿಐ ದಾಳಿ

ಹೊಸದಿಲ್ಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ಆರ್‌ಜೆಡಿ ನಾಯಕ ಲಾಲು ಪ್ರಸಾದ್ ಯಾದವ್‌ಗೆ ಸಂಬಂಧಿಸಿದ 15 ಸ್ಥಳಗಳಲ್ಲಿ ಇಂದು ಸಿಬಿಐ ದಾಳಿ  ನಡೆಸಿದೆ.

ಇದು ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ಲಾಲು ಯಾದವ್ ಮತ್ತು ಅವರ ಮಗಳ ವಿರುದ್ಧದ ಹೊಸ ಪ್ರಕರಣವಾಗಿದೆ. ಉದ್ಯೋಗಕ್ಕೆ  ಪ್ರತಿಯಾಗಿ ನಿರ್ದಿಷ್ಟ ಭೂಮಿ ಅಥವಾ ನಿವೇಶನಗಳನ್ನು ತೆಗೆದುಕೊಳ್ಳಲಾಗಿದೆ ಎಂಬ ಆರೋಪದಡಿಯಲ್ಲಿ ಸಿಬಿಐ ಪ್ರಾಥಮಿಕ ತನಿಖೆಯನ್ನು ಆರಂಭಿಸಿದ್ದು ಅದನ್ನು ಈಗ ಎಫ್‌ಐಆರ್ ಆಗಿ ಪರಿವರ್ತಿಸಲಾಗಿದೆ. ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ವಾರಗಳ ಹಿಂದಷ್ಟೇ ಜಾಮೀನು ಪಡೆದಿದ್ದರು.

ಲಾಲು, ಅವರ ಪತ್ನಿ ರಾಬ್ರಿ ಮತ್ತು ಮಗಳು ಮಿಸಾ ಅವರಿಗೆ ಸಂಬಂಧಿಸಿದ ಬಿಹಾರ ಮತ್ತು ದೆಹಲಿಯ ಹಲವು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ.

Join Whatsapp
Exit mobile version