ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಉಸಿರಾಟದ ತೊಂದರೆ; ತುರ್ತು ಚಿಕಿತ್ಸೆ ನೀಡಿ ಪ್ರಾಣ ರಕ್ಷಿಸಿದ ತೆಲಂಗಾಣ ರಾಜ್ಯಪಾಲೆ

Prasthutha|

ಹೊಸದಿಲ್ಲಿ: ವಿಮಾನದಲ್ಲಿ ಪ್ರಯಾಣಿಸುವಾಗ ಐಪಿಎಸ್ ಅಧಿಕಾರಿಯೊಬ್ಬರಿಗೆ ಉಸಿರಾಟದ ತೊಂದರೆ‌ ಕಾಣಿಸಿಕೊಂಡಿದ್ದು,   ತೆಲಂಗಾಣ ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ಅವರು ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಿ ಪ್ರಾಣ ಉಳಿಸಿದ್ದಾರೆ.

- Advertisement -

ದೆಹಲಿಯಿಂದ ಹೈದರಾಬಾದ್ ಗೆ ಆಗಮಿಸುತ್ತಿದ್ದ ವಿಮಾನದಲ್ಲಿ ಹೆಚ್ಚುವರಿ ಡಿಜಿಪಿ ಶ್ರೇಣಿಯ ಐಪಿಎಸ್ ಅಧಿಕಾರಿ ಕೆ ಟಿ ಉಜೇಲಾ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ.

ಈ ವೇಳೆ ಪ್ರಯಾಣಿಕರಲ್ಲಿ ಯಾರಾದರೂ ವೈದ್ಯರು ಇದ್ದಾರೆಯೇ ಎಂದು  ವಿಮಾನದ ಸಿಬ್ಬಂದಿ  ಕೇಳಿದಾಗ ತಕ್ಷಣವೇ ತಮಿಳಿಸೈ ಸೌಂದರರಾಜನ್ ಮಂದೆ ಬಂದು ಯಶಸ್ವಿಯಾಗಿ ನಿಭಾಯಿಸಿದ್ದಾರೆ.

- Advertisement -

ತೆಲಂಗಾಣದ ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ಅವರು ತಮ್ಮ ರಾಜಕೀಯ ಪ್ರವೇಶಕ್ಕೂ ಮುನ್ನ ಸ್ತ್ರೀರೋಗ ತಜ್ಞರಾಗಿದ್ದರು.

Join Whatsapp