ಭಕ್ತರ ವಾಹನ ಅಪಘಾತ | ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ: ಸಿಎಂ ಬೊಮ್ಮಾಯಿ ಘೋಷಣೆ

Prasthutha|

ಬೆಳಗಾವಿ: ರಾಮದುರ್ಗ ತಾಲೂಕಿನ ಚುಂಚನೂರು ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 6 ಮಂದಿಯ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ನೀಡುವುದಾಗಿ ಮುಖ್ಯಮಂತ್ರಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸವದತ್ತಿ ಯಲ್ಲಮ್ಮ ಜಾತ್ರೆಗೆ ತೆರಳುತ್ತಿದ್ದ ವಾಹನ ಅಪಘಾತಕ್ಕೀಡಾಗಿ 6 ಜನ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಮೃತರ ಆತ್ಮಕ್ಕೆ ಸದ್ಗತಿ ಸಿಗಲಿ, ಕುಟುಂಬಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ ಎಂದರು.
ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿ ನೀಡಲಾಗುವುದು ಹಾಗೂ ಗಾಯಗೊಂಡವರ ಚಿಕಿತ್ಸೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.



Join Whatsapp
Exit mobile version