ಎತ್ತಿನಗಾಡಿ ಓಟದ ಸ್ಪರ್ಧೆಯಲ್ಲಿ ನೊಗ ಬಡಿದು ರೈತ ಸ್ಥಳದಲ್ಲೇ ಸಾವು

Prasthutha|

ಮಂಡ್ಯ: ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆಯಲ್ಲಿ ಎತ್ತಿನಗಾಡಿಯ ನೊಗ ಬಡಿದು ಕೆಳಕ್ಕೆ ಬಿದ್ದ ರೈತನ ಮೇಲೆ ಗಾಡಿ ಹರಿದು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ಚಿಕ್ಕಮಂಡ್ಯ ಗ್ರಾಮದಲ್ಲಿ ನಡೆದಿದೆ.

- Advertisement -

ಘಟನೆಯಲ್ಲಿ ಒಬ್ಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಕೀಲಾರ ಗ್ರಾಮದ ರೈತ ಮುಖಂಡ ನಾಗರಾಜು(55) ಸ್ಥಳದಲ್ಲಿಯೇ ಮೃತಪಟ್ಟಿರುವ ವ್ಯಕ್ತಿ. ಗಂಭೀರ ಗಾಯಗೊಂಡ ಹುಲಿವಾನ ಗ್ರಾಮದ 12 ವರ್ಷದ ಬಾಲಕನನ್ನು ನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ನಾಗರಾಜು ರೈತ ಸಂಘದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಶ್ರೀ ಹಳ್ಳಿಕೇಶ್ವರ ಬೋರೇಶ್ವರ ಹಾಗೂ ರೈತಮಿತ್ರ ಬಳಗದ ವತಿಯಿಂದ ಚಿಕ್ಕಮಂಡ್ಯ ಗ್ರಾಮದಲ್ಲಿ ಎರಡು ದಿನಗಳಿಂದ ನಡೆಯುತ್ತಿದ್ದ 8ನೇ ವರ್ಷದ ಅಂತರಾಜ್ಯ ಮಟ್ಟದ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆಯಲ್ಲಿ ಎರಡನೇ ದಿನವಾದ ಭಾನುವಾರ ಈ ದುರ್ಘಟನೆ ನಡೆದಿದೆ.

Join Whatsapp