ಖಾಸಗಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

Prasthutha|

ತುಮಕೂರು:  ಖಾಸಗಿ ಬಸ್ ಹಾಗೂ ಲಾರಿ ನಡುವೆ ಅಪಘಾತವಾಗಿ ನಾಲ್ವರು ಮೃತಪಟ್ಟ ದಾರುಣ ಘಟನೆ ನಗರದ ಹೊರ ವಲಯದ ಗುಬ್ಬಿ ರಸ್ತೆಯ ಸಿದ್ಧಾರ್ಥ ನಗರದ ಸಮೀಪ ನಡೆದಿದೆ.

- Advertisement -

ಮೃತರ ವಿವರಗಳು ಇನ್ನೂ ಲಭ್ಯವಾಗಿಲ್ಲ.

ಮಾರುಕಟ್ಟೆಯಿಂದ ಹೂವು ತುಂಬಿಕೊಂಡು ಗುಬ್ಬಿ ಕಡೆಗೆ ಹೋಗುತ್ತಿದ್ದ ಟಾಟಾ ಏಸ್‌ ಹಾಗೂ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಟಾಟಾ ಏಸ್‌ನಲ್ಲಿದ್ದವರು ಮೃತಪಟ್ಟಿದ್ದಾರೆ.

- Advertisement -

ಅಪಘಾತ ಸಂಭವಿಸುತ್ತಿದ್ದಂತೆ ಜನರು ನೆರವಿಗೆ ಬಂದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದರು. ಬಸ್‌ನಲ್ಲಿ ಇದ್ದ ಪ್ರಯಾಣಿಕರು ತುಮಕೂರು ಬಸ್ ನಿಲ್ದಾಣಕ್ಕೆ ತೆರಳಲು ನೆರವಾದರು.

Join Whatsapp