Home ಕರಾವಳಿ ಮೀನು ಹಿಡಿಯುವ ಬಲೆಯಲ್ಲಿ ಸಿಲುಕಿ ಮೀನುಗಾರ ಮೃತ್ಯು

ಮೀನು ಹಿಡಿಯುವ ಬಲೆಯಲ್ಲಿ ಸಿಲುಕಿ ಮೀನುಗಾರ ಮೃತ್ಯು

ಉಡುಪಿ:ಮೀನುಗಾರಿಕೆಗೆ ತೆರಳಿದ್ದ ಮೀನುಗಾರನೊಬ್ಬ ಬಲೆಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪೊಲಿಪು ಸಮುದ್ರ ಕಿನಾರೆಯಲ್ಲಿ ಘಟನೆ ನಡೆದಿದೆ.

29 ವರ್ಷದ ಕಿಶೋರ್ ಮೃತರು. ಎಂದಿನಂತೆ ಇಂದು ಕೂಡ ಕಿಶೋರ್ ಮೀನುಗಾರಿಕೆಗೆ ತೆರಳಿದಾಗ ದುರಂತ ನಡೆದಿದೆ.

ಮೀನಿಗೆ ಬೀಸಿದ್ದ ಬಲೆಯಲ್ಲಿ ಸಿಲುಕಿ ಒದ್ದಾಡಿ ಕಿಶೋರ್ ಸಾವನ್ನಪ್ಪಿದ್ದಾರೆ.

ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version