Home ಕರಾವಳಿ ಮುಳುಗಿದ ಹಡಗಿಗೆ ಮೀನುಗಾರಿಕಾ ಬೋಟ್ ಡಿಕ್ಕಿ: 11 ಮಂದಿಯ ರಕ್ಷಣೆ, ಓರ್ವ ಕಣ್ಮರೆ

ಮುಳುಗಿದ ಹಡಗಿಗೆ ಮೀನುಗಾರಿಕಾ ಬೋಟ್ ಡಿಕ್ಕಿ: 11 ಮಂದಿಯ ರಕ್ಷಣೆ, ಓರ್ವ ಕಣ್ಮರೆ

ಬೋಟ್(ಸಂಗ್ರಹ ಚಿತ್ರ)

ಮಂಗಳೂರು: ಉಳ್ಳಾಲ ಸಮೀಪದ ಸಮುದ್ರದಲ್ಲಿ ಮುಳುಗಿದ ಹಡಗಿಗೆ ಮೀನುಗಾರಿಕಾ ಬೋಟ್ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಈ ವೇಳೆ 11 ಮೀನುಗಾರರನ್ನು ರಕ್ಷಣೆ ಮಾಡಲಾಗಿದ್ದರೆ, ಓರ್ವ ಮೀನುಗಾರ ಕಣ್ಮರೆಯಾಗಿದ್ದಾನೆ.

ಆದ್ಯ ಎಂಬ ಹೆಸರಿನ ಆಳ ಸಮುದ್ರ ಮೀನುಗಾರಿಕಾ ಬೋಟ್ ಬೆಳಗ್ಗೆ 11 ಗಂಟೆ ಸುಮಾರಿಗೆ ಉಳ್ಳಾಲ ಸಮೀಪದ ಸಮುದ್ರದ ಮಧ್ಯೆ ಕೆಲವು ವರ್ಷಗಳ ಹಿಂದೆ ಮುಳುಗಿದ್ದ ಹಡಗಿಗೆ ಡಿಕ್ಕಿ ಹೊಡೆದಿದೆ. ಬೋಟ್​ ನಲ್ಲಿ 12 ಮಂದಿ ಮೀನುಗಾರರು ಇದ್ದರು. ಬೋಟ್ ಡಿಕ್ಕಿ ಹೊಡೆದ ಪರಿಣಾಮ ಮೀನುಗಾರರು ಸಮುದ್ರಕ್ಕೆ ಬಿದ್ದಿದ್ದು, 11 ಮೀನುಗಾರರನ್ನು ಸಮೀಪದಲ್ಲಿದ್ದ ಇತರ ಮೀನುಗಾರಿಕಾ ಬೋಟ್​ ನವರು ರಕ್ಷಿಸಿದ್ದಾರೆ. ತಮಿಳುನಾಡು ಮೂಲದ ಓರ್ವ ಮೀನುಗಾರ ಕಣ್ಮರೆಯಾಗಿದ್ದಾನೆ. ಕಣ್ಮರೆಯಾಗಿರುವ ಮೀನುಗಾರನ ಶೋಧ ಕಾರ್ಯ ಮುಂದುವರಿದಿದೆ.

ಈ ಪ್ರದೇಶದಲ್ಲಿ ಹಲವು ವರ್ಷಗಳ ಹಿಂದೆ ಹಡಗೊಂದು ಮುಳುಗಿದ್ದು, ಅದನ್ನು ತೆರವುಗೊಳಿಸಲಾಗಿರಲಿಲ್ಲ. ಈ ಮುಳುಗಡೆಯಾಗಿರುವ ಹಡಗಿನ ಜಾಗದಲ್ಲಿ ಯಾವುದೇ ಗುರುತುಗಳು ಇಲ್ಲದೇ ಇರುವುದು ಮೀನುಗಾರಿಕಾ ಬೋಟ್ ಡಿಕ್ಕಿ ಹೊಡೆಯಲು ಕಾರಣ ಎಂದು ತಿಳಿದು ಬಂದಿದೆ.

Join Whatsapp
Exit mobile version