ಮೇಕೆದಾಟು ಪಾದಯಾತ್ರೆ: ಡಿಕೆಶಿ ಸೇರಿ 29ಕ್ಕೂ ಹೆಚ್ಚು ಮಂದಿ ವಿರುದ್ಧ ನಾಲ್ಕನೇ ಕೇಸ್ ದಾಖಲು

Prasthutha|

ಬೆಂಗಳೂರು: ಕಾಂಗ್ರೆಸ್​ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ವೇಳೆ ಕೋವಿಡ್​ ನಿಯಮಾವಳಿ ಉಲ್ಲಂಘಿಸಿದ ಆರೋಪದ ಮೇಲೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಸೇರಿ 29ಕ್ಕೂ ಹೆಚ್ಚು ಮಂದಿಯ ವಿರುದ್ಧ ನಾಲ್ಕನೇ ಎಫ್​ಐಆರ್​​ ದಾಖಲಾಗಿದೆ.

- Advertisement -


ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಡಿ.ಕೆ.ಸುರೇಶ್ ಸೇರಿದಂತೆ 29ಕ್ಕೂ ಹೆಚ್ಚು ಮಂದಿಯ ವಿರುದ್ಧ ರಾಮನಗರ ತಹಶೀಲ್ದಾರ್ ವಿಜಯಕುಮಾರ್ ನೀಡಿರುವ ದೂರಿನ ಮೇಲೆ ರಾಮನಗರ ಗ್ರಾಮಾಂತರ ವೃತ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ನಾಲ್ಕನೇ ಎಫ್​ಐಆರ್​ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಸಂಸದ ಡಿ.ಕೆ. ಸುರೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್​, ಶಾಸಕ ಪ್ರಿಯಾಂಕ್​ ಖರ್ಗೆ, ಮಾಜಿ ಸಚಿವ ಟಿಬಿ ಜಯಚಂದ್ರ ಸೇರಿದಂತೆ ಇನ್ನೂ ಇತರರ ಹೆಸರಿದೆ. ಪಾದಯಾತ್ರೆಗೆ ಸಂಬಂಧಿಸಿದಂತೆ ಡಿ.ಕೆ. ಶಿವಕುಮಾರ್​ ವಿರುದ್ಧ ದಾಖಲಾದ ನಾಲ್ಕನೇ ಎಫ್ ಐಆರ್ ಇದಾಗಿದ್ದು, ಸಿದ್ದರಾಮಯ್ಯ ವಿರುದ್ಧ ಮೂರು ಕೇಸ್​ ದಾಖಲಾಗಿದೆ. ಮೂರು ದಿನಗಳ ಹಿಂದೆ ಸಾತನೂರು ಪೊಲೀಸ್ ಠಾಣೆಯಲ್ಲಿ 64 ಮಂದಿಯ ವಿರುದ್ಧ ಎಫ್​ಐಆರ್​​ ದಾಖಲಿಸಲಾಗಿತ್ತು.

Join Whatsapp