Home ಟಾಪ್ ಸುದ್ದಿಗಳು ಕಾಶ್ಮೀರಿ ಪಂಡಿತನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳ ತಂಡ

ಕಾಶ್ಮೀರಿ ಪಂಡಿತನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳ ತಂಡ

ಕಾಶ್ಮೀರ: ಕಾಶ್ಮೀರ ಪಂಡಿತರೊಬ್ಬರನ್ನು ದುಷ್ಕರ್ಮಿಗಳ ತಂಡವೊಂದು ಗುಂಡಿಕ್ಕಿ ಹತ್ಯೆ ನಡೆಸಿರುವ ಘಟನೆ ಶೋಪಿಯಾನ್ ಜಿಲ್ಲೆಯಲ್ಲಿ ನಡೆದಿದೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ಚೌಧರಿ ಗುಂಡ್ ಪ್ರದೇಶದ ಕಾಶ್ಮೀರಿ ಪಂಡಿತ ಪುರನ್ ಕ್ರಿಶನ್ ಭಟ್ ಎಂಬವರ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡ ಅವರನ್ನು ಶೋಪಿಯಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪ್ಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ಈ ಹಿಂದೆ ಆಗಸ್ಟ್ 16ರಂದು ಶೋಪಿಯಾನ್ ಜಿಲ್ಲೆಯ ತೋಟದಲ್ಲಿ ಕಾಶ್ಮೀರಿ ಪಂಡಿತ ಸುನೀಲ್ ಕುಮಾರ್ ಎಂಬಾತ ದುಷ್ಕರ್ಮಿಗಳ ನಡೆಸಿದ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದು, ಘಟನೆಯಲ್ಲಿ ಆತನ ಸಹೋದರ ಪಿಂಟು ಕುಮಾರ್ ಗಾಯಗೊಂಡಿದ್ದರು.

Join Whatsapp
Exit mobile version