ಅಪ್ರಾಪ್ತ ಬಾಲಕನನ್ನು ವಿವಸ್ತ್ರಗೊಳಿಸಿ ಜೈಶ್ರೀರಾಂ ಘೋಷಣೆ ಕೂಗುವಂತೆ ಒತ್ತಾಯ; ಆರೋಪಿಗಳ ವಿರುದ್ಧ ಎಫ್ ಐ ಆರ್ ದಾಖಲು

Prasthutha|

ಭೋಪಾಲ್: 11 ವರ್ಷದ ಬಾಲಕನ ಮೇಲೆ ಮೂವರು ಹಲ್ಲೆ ನಡೆಸಿ ಜೈಶ್ರೀರಾಂ ಘೋಷಣೆ ಕೂಗುವಂತೆ ಬಲವಂತ ಮಾಡಿದ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ.

- Advertisement -


ಬಾಲಕನನ್ನು ಆರೋಪಿಗಳು ನಗರದ ನಿಪಾನಿಯಾ ಪ್ರದೇಶದ ಕೊಳದ ಬಳಿಗೆ ಆಟಿಕೆಗಳನ್ನು ಖರೀದಿಸುವ ನೆಪದಲ್ಲಿ ಕರೆದೊಯ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕನನ್ನು ಬೆತ್ತಲೆಗೊಳಿಸಿ ಮಾಡಿ “ಜೈ ಶ್ರೀ ರಾಮ್”, “ಹಿಂದೂಸ್ತಾನ್ ಜಿಂದಾಬಾದ್” ಮತ್ತು “ಪಾಕಿಸ್ತಾನ್ ಮುರ್ದಾಬಾದ್” ಎಂಬ ಘೋಷಣೆಗಳನ್ನು ಕೂಗುವಂತೆ ಬಲವಂತ ಮಾಡುತ್ತಿರುವ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.


ದುಷ್ಟರ ಕೈಯಿಂದ ತಪ್ಪಿಸಿಕೊಂಡ ಬಾಲಕ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದು, ಬಾಲಕನ ಪೋಷಕರ ದೂರಿನ ಆಧಾರದ ಮೇಲೆ ಆರೋಪಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323, 294, 365 ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

Join Whatsapp