ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಸ ಕಾರು

Prasthutha|

ಹಾವೇರಿ: ಎರಡು ತಿಂಗಳ ಹಿಂದೆಯಷ್ಟೇ ಖರೀದಿಸಿದ ಕಾರಿಗೆ ಆಕಸ್ಮಿಕ ಬೆಂಕಿ ತಗುಲಿದ್ದು, ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಕುಣಿಮೆಳ್ಳಿಹಳ್ಳಿ ಗ್ರಾಮದ ಸಮೀಪ ಗದಗ-ಹಾವೇರಿ ರಾಷ್ಟ್ರೀಯ ಹೆದ್ದಾರಿ- 4ರಲ್ಲಿ ನಡೆದಿದೆ.

- Advertisement -


ಗದಗ ನಗರದ ನಿವಾಸಿ ವಿಕ್ರಂ ಬಾಪನಾ ಹಿರಾಚಂದ್‌ ಅವರಿಗೆ ಸೇರಿದ ಕಾರು ಎನ್ನಲಾಗಿದೆ. ಚಾಲಕ ಸೇರಿ ಮೂವರು ಪ್ರಯಾಣಿಸುತ್ತಿದ್ದು ಈ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಏಕಾಏಕಿ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಎಚ್ಚೆತ್ತುಕೊಂಡು ತಕ್ಷಣ ರಸ್ತೆ ಬದಿಗೆ ಕಾರು ನಿಲ್ಲಿಸಿ, ಕೆಳಗಿಳಿಯುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು ಉರಿಯಲು ಪ್ರಾರಂಭಿಸಿದೆ.

- Advertisement -


ಕಾರು ಖರೀದಿಸಿ 2 ತಿಂಗಳಾಗಿತ್ತು ಎನ್ನಲಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ.

Join Whatsapp