Home ಟಾಪ್ ಸುದ್ದಿಗಳು ತಮಿಳುನಾಡಿನಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಕರ್ನಾಟಕದ ಪೊಲೀಸ್ ಅಧಿಕಾರಿ ಅಪಘಾತದಲ್ಲಿ ಮೃತ

ತಮಿಳುನಾಡಿನಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಕರ್ನಾಟಕದ ಪೊಲೀಸ್ ಅಧಿಕಾರಿ ಅಪಘಾತದಲ್ಲಿ ಮೃತ

ಚೆನ್ನೈ: ಮೊದಲ ಹಂತದಲ್ಲಿ ನಡೆಯುವ ಲೋಕಸಭಾ ಚುನಾವಣೆ ನಿಮಿತ್ತ ತಮಿಳುನಾಡಿನಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಕರ್ನಾಟಕದ ಪೊಲೀಸ್ ಅಧಿಕಾರಿ ಅಪಘಾತದಲ್ಲಿ ಮೃತಪಟ್ಟಿರುವ ಧಾರುಣ ಘಟನೆ ಗುರುವಾರ ನಡೆದಿದೆ.

19ರಿಂದ ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಒಂದೇ ಹಂತದಲ್ಲಿ ತಮಿಳುನಾಡಿನ ಎಲ್ಲಾ 39 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಭದ್ರತೆಗಾಗಿ ಕರ್ನಾಟಕದಿಂದ ಪೊಲೀಸ್​ ಅಧಿಕಾರಿಗಳು ಚುನಾವಣಾ ಕಾರ್ಯಕ್ಕಾಗಿ ತೆರಳಿದ್ದರು. ಆದರೆ ತಮಿಳುನಾಡು ಸರ್ಕಾರಿ ಬಸ್​ ಪೊಲೀಸ್​ ಅಧಿಕಾರಿಗಳಿದ್ದ ಜೀಪ್​ಗೆ ಡಿಕ್ಕಿ ಹೊಡೆದ ಪರಿಣಾಮ ಕೆಎಸ್​ಆರ್​ಪಿ ಮೂರನೇ ಬೆಟಾಲಿಯನ್ ಅಸಿಸ್ಟೆಂಟ್ ಕಮಾಂಡೆಂಟ್ ಟಿ ಪ್ರಭಾಕರ ಹಾಗೂ ತಮಿಳುನಾಡು ಕಾನ್​ಸ್ಟೇಬಲ್​ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ಲ ದುರಂತ ನಡೆದಿದೆ.


ತಮಿಳುನಾಡು ಚುನಾವಣೆಯಲ್ಲಿ ಭದ್ರತೆಗೆ ಸುಮಾರು 800 ಮಂದಿ ಕೆಎಸ್ ಆರ್ ಪಿ ಸಿಬ್ಬಂದಿ ತಮಿಳುನಾಡಿಗೆ ಹೋಗಿದ್ದರು. ತಮಿಳುನಾಡಿನ ತಿರುವಣಮಲೈ ಬಳಿ ಭದ್ರತಾ ಸಿಬ್ಬಂದಿ ಇದ್ದ ಜೀಪ್​ಗೆ ಬಸ್​ವೊಂದು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಮಾಂಡೆಂಟ್ ಟಿ ಪ್ರಭಾಕರ್ ಹಾಗೂ ತಮಿಳುನಾಡು ಕಾನ್​ಸ್ಟೇಬಲ್ ದಿನೇಶ್​ ​ ಸಾವನ್ನಪ್ಪಿದರೆ, ಡೆಪ್ಯೂಟಿ ಕಮಾಂಡೆಂಟ್ ಹೇಮಂತ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾನ್ಸ್ ಟೇಬಲ್ ವಿಠಲ್ ಎಂಬುವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Join Whatsapp
Exit mobile version