ಇನ್ನೊಂದು ಧರ್ಮದ ಪವಿತ್ರ ಸ್ಥಳದಲ್ಲಿ ದೇವಸ್ಥಾನ ಕಟ್ಟಲಾಗಿದೆ: ನಟಿ ಶ್ರುತಿ ಹರಿಹರನ್

Prasthutha|

ಚೆನ್ನೈ: ಸಂವಿಧಾನದ ಪ್ರತಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ದಕ್ಷಿಣ ಭಾರತದ ಖ್ಯಾತ ನಟಿ ಶ್ರುತಿ ಹರಿಹರನ್, ಭಾರತೀಯ ಇನ್ನೊಂದು ಧರ್ಮದ ಪ್ರವಿತ್ರ ಸ್ಥಳದಲ್ಲಿ ದೇವಸ್ಥಾನ ಕಟ್ಟಿರೋದು ಅಸಮಧಾನ ಹೆಚ್ಚಿಸಿದೆ ಎಂದಿದ್ದಾರೆ.

- Advertisement -

ನಾನು ಏನನ್ನು ನಂಬುತ್ತೇನೋ ಅದರ ಹಿಂದೆ ಹೋಗುವುದು ಇದೀಗ ಉತ್ತಮ ಪ್ರವೃತ್ತಿಯಾಗಿಟ್ಟಿದೆ. ಇಂತಹ ಸಮಯದಲ್ಲಿ ಸಂವಿಧಾನವನ್ನು ನೆನಪಿಟ್ಟುಕೊಳ್ಳುವುದು ಏಕೆ ಮುಖ್ಯ? ಧರ್ಮದ ವಿಷಯದಲ್ಲಿ ದೇಶವು ತಟಸ್ಥವಾಗಿರಬೇಕೆಂದು ಸಂವಿಧಾನದಲ್ಲಿ ಸ್ಪಷ್ಟವಾಗಿ ಉಲ್ಲೇಖವಾಗಿದೆ. ಇದು ಯಾವುದೇ ಧರ್ಮದ ವಿರುದ್ಧ ತಾರತಮ್ಯ ಅಥವಾ ಪೋಷಣೆ ಮಾಡುವಂತಿಲ್ಲ. ನಾನಿಲ್ಲಿ ರಾಜಕೀಕರಣ ಆಗುತ್ತಿರುವುದನ್ನು ಗಮನಿಸುತ್ತಿದ್ದೇನೆ. ಇದನ್ನೆಲ್ಲ ನೋಡಿ ಆರಾಮಾಗಿ ಕೂತು ಗಮನಿಸಲು ಸಾಧ್ಯವಿಲ್ಲಎಂದು ಶ್ರುತಿ ಹರಿಹರನ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಇನ್ನೊಂದು ಧರ್ಮದ ಪವಿತ್ರ ಸ್ಥಳದಲ್ಲಿ ದೇವಸ್ಥಾನ ಕಟ್ಟುವ ರಾಜಕೀಯ ಭರವಸೆ ನೀಡಿ, ಅದನ್ನೀಗ ಈಡೇರಿಸಿರುವುದು. ಅಲ್ಲದೆ ಅದನ್ನು ಸಂಭ್ರಮಿಸುತ್ತಿರುವ ರೀತಿ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಶ್ರುತಿ ಹರಿಹರನ್ ಹೇಳಿದ್ದಾರೆ.



Join Whatsapp