ಈಜಲು ಹೋಗಿದ್ದ ಯುವ ವೈದ್ಯ ನಾಪತ್ತೆ

Prasthutha|

ಬೆಂಗಳೂರು: ಸ್ನೇಹಿತರ ಜೊತೆ ಈಜಲು ಹೋಗಿದ್ದ ಯುವ ವೈದ್ಯ ನಾಪತ್ತೆಯಾಗಿರುವ ಘಟನೆ ಕನಕಪುರದ ಮಾವತ್ತೂರು ಕೆರೆಯಲ್ಲಿ ನಡೆದಿದೆ.

- Advertisement -

ಕನಕಪುರದ ದಯಾನಂದ ಸಾಗರ ಮೆಡಿಕಲ್ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಚಿನ್ ಕುಮಾರ್(26) ನಾಪತ್ತೆಯಾದ ವೈದ್ಯರಾಗಿದ್ದಾರೆ​. ನಿನ್ನೆ ಸಂಜೆ ಸ್ನೇಹಿತರ ಜೊತೆಗೆ ಕೆರೆ ಬಳಿ ತೆರಳಿದ್ದರು. ಈ ವೇಳೆ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಸ್ನೇಹಿತರಿಂದ ಬಂದ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಕೆರೆಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕನಕಪುರ ಟೌನ್ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



Join Whatsapp