ಜನ್ಮದಿನದಂದೇ ಬದುಕಿಗೆ ಅಂತ್ಯ ಹಾಡಿದ ಯುವ ಉಪನ್ಯಾಸಕಿ !

Prasthutha|

ಚಾಮರಾಜನಗರ: ಉಪನ್ಯಾಸಕಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

- Advertisement -


ಚಂದನಾ(26) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ.

ಚಂದನಾ ಯಳಂದೂರು ತಾಲೂಕಿನ ಅಂಬಳೆ ಗ್ರಾಮದವರಾಗಿದ್ದು, ಜೆಎಸ್ ಎಸ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅವಿವಾಹಿತೆಯಾಗಿದ್ದಾರೆ.

- Advertisement -

ಇಂದು ಇವರ ಹುಟ್ಟಹಬ್ಬವಿದ್ದು, ಅಂದೇ ನೇಣಿಗೆ ಶರಣಾಗಿರೋದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಅಲ್ಲದೆ, ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು, ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಅವಿವಾಹಿತೆಯಾಗಿದ್ದ ಚಂದನಾ ಯಳಂದೂರು ತಾಲ್ಲೂಕು ಅಂಬಳೆ ಗ್ರಾಮದ ನ್ಯಾಯಬೆಲೆ ಅಂಗಡಿ ಮಾಲೀಕ ಮಹದೇವಸ್ವಾಮಿ ಎಂಬುವರ ಪುತ್ರಿ. ಅವರು ನಗರದ ಜೆ ಎಸ್ ಎಸ್ ಕಾಲೇಜು ಕ್ಯಾಂಪಸ್ ನಲ್ಲಿರುವ ಹಾಸ್ಟೆಲ್ ನಲ್ಲಿ ವಾಸವಿದ್ದರು.
ಇಂದು ಬೆಳಿಗ್ಗೆ 11.30 ಗಂಟೆಯಾದರೂ ಚಂದನಾ ಅವರು ಹಾಸ್ಟೆಲ್ ರೂಮಿನಿಂದ ಹೊರಬಾರದ ಕಾರಣ ಸಹೋದ್ಯೋಗಿಗಳು ವೆಂಟಿಲೇಟರ್ ಮೂಲಕ ನೋಡಿದಾಗ ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ.

ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Join Whatsapp