ಅಪ್ರಾಪ್ತ ಬಾಲಕನನ್ನು ಕಿಡ್ನಾಪ್ ಮಾಡಿದ ಯುವಕ| ಅಪಹರಣಕ್ಕೆ ಕಾರಣವೇನು ಗೊತ್ತಾ?

Prasthutha|

 ಹೊಸದಿಲ್ಲಿ: 21 ವರ್ಷದ ಯುವಕನೊಬ್ಬ ಅಪ್ರಾಪ್ತ ಬಾಲಕನನ್ನು ಅಪಹರಿಸಿದ್ದು, ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

- Advertisement -

ಯುವಕನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಅಪಹರಣಕ್ಕೆ ಆರೋಪಿ ನೀಡಿದ ಕಾರಣ, “ಸಂತಾನವಿಲ್ಲದ ನನ್ನ ಚಿಕ್ಕಪ್ಪನಿಗೆ ಉಡುಗೊರೆಯಾಗಿ ನೀಡುವ ಉದ್ದೇಶದಿಂದ ಅಪ್ರಾಪ್ತನನ್ನು ಅಪಹರಿಸಿದ್ದೆ” ಎಂದು ಹೇಳಿದ್ದಾನೆ.

ಗೌತಮಪುರಿಯ ಮನೆಯ ಹೊರಗೆ ಆಟವಾಡುತ್ತಿದ್ದ ಅಪ್ರಾಪ್ತ ಬಾಲಕ ನಾಪತ್ತೆಯಾಗಿದ್ದ. ಬಾಲಕನಿಗಾಗಿ ಹುಡುಕಾಟ ನಡೆಸಿದ ಎರಡು ದಿನಗಳ ನಂತರ ಬಾಲಕನ ತಂದೆ ಪೊಲೀಸರಿಗೆ ದೂರು ನೀಡಿದ್ದರು.

- Advertisement -

ನೆರೆಹೊರೆಯವರಾದ ನೀರಜ್ ಕೂಡ ಅದೇ ರಾತ್ರಿ ಪ್ರದೇಶದಿಂದ ನಾಪತ್ತೆಯಾಗಿದ್ದ. ಪೊಲೀಸರು ನೀರಜ್ ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಬಾಲಕನನ್ನು ಅಪಹರಿಸಿ ಅಲಿಘರ್‌ನಲ್ಲಿರುವ ತನ್ನ ಚಿಕ್ಕಪ್ಪ ಸುನೀತ್ ಬಾಬು ಮನೆಗೆ ಕಳುಹಿಸಿದ್ದಾಗಿ ಬಾಯ್ಬಿಟ್ಟಿದ್ದಾನೆ.

 ಚಿಕ್ಕಪ್ಪನ ಹೆಂಡತಿ ನಾಲ್ಕು ಗಂಡು ಮಕ್ಕಳಿಗೆ ಜನ್ಮ ನೀಡಿದ್ದರೂ ಯಾರೂ ಬದುಕುಳಿಯಲಿಲ್ಲ. ಹಾಗಾಗಿ ಬಾಲಕನನ್ನು ಉಡುಗೊರೆಯಾಗಿ ನೀಡಲು ಬಯಸಿದ್ದೆ ಎಂದು ಆರೋಪಿ ಹೇಳಿದ್ದಾನೆ. ಪೊಲೀಸರು ಮಗುವನ್ನು ರಕ್ಷಿಸಿ ಚಿಕ್ಕಪ್ಪ-ಸೋದರಳಿಯನನ್ನು ಬಂಧಿಸಿದ್ದಾರೆ.

Join Whatsapp