ಶ್ರದ್ಧಾ ವಾಲ್ಕರ್ ಪ್ರಕರಣದ ಆರೋಪಿ ಅಫ್ತಾಬ್ ಮೇಲೆ ದಾಳಿಗೆ ಯತ್ನಿಸಿದ ಯುವಕರು

Prasthutha|

ಹೊಸದಿಲ್ಲಿ: ಶ್ರದ್ಧಾ ವಾಲ್ಕರ್ ಕೊಲೆ ಪ್ರಕರಣದ ಆರೋಪಿ ಅಫ್ತಾಬ್ ಮೇಲೆ ಯುವಕರಿಬ್ಬರು ದಾಳಿ ನಡೆಸಲು ಯತ್ನಿಸಿದ ಘಟನೆ ನಡೆದಿದೆ.

- Advertisement -

ಆರೋಪಿ ಇದ್ದ ಪೊಲೀಸ್‌ ವಾಹನದ ಹತ್ತಿರ ಆಯುಧಗಳನ್ನು ಹಿಡಿದು ಬಂದ ಯುವಕರು ದಾಳಿ ನಡೆಸಲು ಯತ್ನಿಸಿದ್ದಾರೆ.  

ಆಪ್ತಾಬ್‌ನನ್ನು ಸುಳ್ಳುಪತ್ತೆ ಪರೀಕ್ಷೆಗೆ ರೋಹಿಣಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕೊಂಡೊಯ್ದ ಸಂದರ್ಭ ಈ ಘಟನೆ ನಡೆದಿದೆ. ದಾಳಿ ನಡೆಸಲು ಬಂದ ಯುವಕರನ್ನು ಬಂಧಿಸಿ, ಅವರಿಂದ ಆಯುಧಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp