Home ಟಾಪ್ ಸುದ್ದಿಗಳು ಕರ್ನಾಟಕ ಬಜೆಟ್ – ಕಾಂಗ್ರೆಸ್ ಸರ್ಕಾರ ಒಂದು ಕೈಯಲ್ಲಿ ಕೊಟ್ಟು ಎರಡು ಕೈಯಿಂದ ತೆಗೆದುಕೊಳ್ಳುವುದು ಬಹಿರಂಗವಾಗಿದೆ...

ಕರ್ನಾಟಕ ಬಜೆಟ್ – ಕಾಂಗ್ರೆಸ್ ಸರ್ಕಾರ ಒಂದು ಕೈಯಲ್ಲಿ ಕೊಟ್ಟು ಎರಡು ಕೈಯಿಂದ ತೆಗೆದುಕೊಳ್ಳುವುದು ಬಹಿರಂಗವಾಗಿದೆ : ಎಎಪಿ

ಬೆಂಗಳೂರು: ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ಕಾಂಗ್ರೆಸ್ ಸರ್ಕಾರವು ಒಂದು ಕೈಯಲ್ಲಿ ಕೊಟ್ಟು ಎರಡು ಕೈಯಿಂದ ತೆಗೆದುಕೊಳ್ಳುವುದು ಬಹಿರಂಗವಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

ವಾಸ್ತವದಲ್ಲಿ ಇಂದು ಮಂಡಿಸಿರುವ ಬಜೆಟ್‌ನಲ್ಲಿ ಶೇ.109ರಷ್ಟು ಆದಾಯ ಕೊರತೆ ಹೆಚ್ಚಳವಾಗಿದ್ದು, ಕಾಂಗ್ರೆಸ್ ಪಕ್ಷ ಕರ್ನಾಟಕದ ಜನತೆಗೆ ನೀಡಿದ ಭರವಸೆಗಳು ಕೇವಲ ಮತಕ್ಕಾಗಿಯೇ ಹೊರತು ಮತದಾರರಿಗಾಗಿ ಅಲ್ಲ. ಕರ್ನಾಟಕದ ಜನರು “ಖಾತರಿ”ಗಳಿಂದ ವಂಚಿಸಿದ್ದಾರೆ. ವಾಸ್ತವದಲ್ಲಿ ಕಾಂಗ್ರೆಸ್ ಸರ್ಕಾರವು ಒಂದು ಕೈಯಲ್ಲಿ ಕೊಟ್ಟು ಎರಡು ಕೈಯಿಂದ ತೆಗೆದುಕೊಳ್ಳುತ್ತಿದೆ ಎಂಬುದನ್ನು ಬಜೆಟ್ ಬಹಿರಂಗಪಡಿಸುತ್ತದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಜನರಿಗೆ ಈಗಾಗಲೇ ಲಭ್ಯವಿರುವ ವಿವಿಧ ಸಬ್ಸಿಡಿಗಳನ್ನು ಕಡಿತಗೊಳಿಸಿದ್ದಾರೆ. ಕೃಷಿ ಮತ್ತು ತೋಟಗಾರಿಕೆ ಶೇ.25ರಷ್ಟು ಕಡಿಮೆಯಾಗಿದೆ. ಸಮಾಜ ಕಲ್ಯಾಣ 42%, ಸಹಕಾರ 16% ಕಡಿಮೆಯಾಗಿದೆ. ಅರಣ್ಯ ಮತ್ತು ಪರಿಸರವನ್ನು 67% ರಷ್ಟು ಕಡಿತಗೊಳಿಸಲಾಗಿದೆ. ಹಾಲು ಶೇ.2ರಷ್ಟು ಕಡಿತವಾಗಿದೆ. ಆದ್ದರಿಂದ ಮಂಡಿಸಿದ ಬಜೆಟ್ ಬೋಗಸ್ ಎಂಬುದು ಸ್ಪಷ್ಟವಾಗಿದೆ ಎಂದು ಎಂದು ಪೃಥ್ವಿ ರೆಡ್ಡಿ ಟೀಕಿಸಿದರು.

Join Whatsapp
Exit mobile version