Home ಟಾಪ್ ಸುದ್ದಿಗಳು ಕೇಜ್ರಿವಾಲ್ ಸರ್ಕಾರದ ಕೆಲಸದಲ್ಲಿ ಹಸ್ತಕ್ಷೇಪ ಮಾಡಲು ಲೆಫ್ಟಿನೆಂಟ್ ಗವರ್ನರನ್ನು ಕೇಂದ್ರ ಛೂ ಬಿಡುತ್ತಿದೆ: ಎಎಪಿ ಆರೋಪ

ಕೇಜ್ರಿವಾಲ್ ಸರ್ಕಾರದ ಕೆಲಸದಲ್ಲಿ ಹಸ್ತಕ್ಷೇಪ ಮಾಡಲು ಲೆಫ್ಟಿನೆಂಟ್ ಗವರ್ನರನ್ನು ಕೇಂದ್ರ ಛೂ ಬಿಡುತ್ತಿದೆ: ಎಎಪಿ ಆರೋಪ

ನವದೆಹಲಿ: ಅರವಿಂದ್ ಕೇಜ್ರಿವಾಲ್ ಸರ್ಕಾರದ ಕೆಲಸಗಳಲ್ಲಿ ಹಸ್ತಕ್ಷೇಪ ಮಾಡುವಂತೆ ಮತ್ತು ರಾಷ್ಟ್ರ ರಾಜಧಾನಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯಿಂದ ದೂರವಿರಲು ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರಿಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ ಎಂದು ಆಮ್ ಆದ್ಮಿ ಪಕ್ಷದ ಶಾಸಕಿ ಅತಿಶಿ ಭಾನುವಾರ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ  ಮಾತನಾಡಿದ ಶಾಸಕಿ ಅತಿಶಿ, ಕಳೆದ 10 ದಿನಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಕೆಲವು ಘೋರ ಅಪರಾಧಗಳ ಬಗ್ಗೆ ಹೊಸ ಲೆಫ್ಟಿನೆಂಟ್ ಗವರ್ನರ್ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಟೀಕಿಸಿದ ಅವರು ದೆಹಲಿ ಸರ್ಕಾರದ ಕೆಲಸದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕಳೆದ 10 ದಿನಗಳಲ್ಲಿ ಲೆಫ್ಟಿನೆಂಟ್ ಗವರ್ನರ್ ಒಂದೇ ಒಂದು ಪೊಲೀಸ್ ಠಾಣೆಯನ್ನು ಸಹ ಪರಿಶೀಲಿಸಿದ್ದಾರೆಯೇ ಎಂದು ಪ್ರಶ್ನಿಸಿದ ಶಾಸಕಿ ಈ ಹಿಂದೆ ನಡೆದ ಪ್ರಕರಣಗಳಲ್ಲಿ ಕಟ್ಟುನಿಟ್ಟಾಗಿ ಅವರು ಕಾರ್ಯನಿರ್ವಹಿಸದಿರಲು ಕಾರಣ ಏನೆಂದು ಪ್ರಶ್ನಿಸಿದರು.

ಕೇಂದ್ರ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ವಿರುದ್ಧ ಮತ್ತಷ್ಟು ಆರೋಪ ಮಾಡಿರುವ ಅತಿಶಿ, ಪೊಲೀಸರಿಂದ ದೂರವಿರಿ, ಅರವಿಂದ್ ಕೇಜ್ರಿವಾಲ್ ಅವರ ಸರ್ಕಾರದಲ್ಲಿ ಹಸ್ತಕ್ಷೇಪ ಮಾಡುವುದು ಮಾತ್ರ ಕೇಂದ್ರ ಸರ್ಕಾರ ಅವರನ್ನು ಕಳುಹಿಸಿದೆ ಎಂದು ಅವರು ಬಲವಾಗಿ ಆರೋಪಿಸಿದ್ದಾರೆ

Join Whatsapp
Exit mobile version