ಎಎಪಿ ಪ್ರಣಾಳಿಕೆ ಬಳಸಿಕೊಂಡು ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದಿದೆ: ಕೇಜ್ರಿವಾಲ್

Prasthutha|

- Advertisement -

ನವದೆಹಲಿ: ಎಎಪಿ ಪ್ರಣಾಳಿಕೆ ಬಳಸಿಕೊಂಡು ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಸಭೆಯೊಂದನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ ವಿಚಾರವನ್ನು ಪ್ರಸ್ತಾಪಿಸಿದರು. ಆಪ್ ಪ್ರಣಾಳಿಕೆಯಲ್ಲಿ ನಾವು ಬಳಸಿದ್ದ ಅಂಶಗಳನ್ನು ಅವರು ಬಳಸಿಕೊಂಡಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಿದೆ ಎಂದಿದ್ದಾರೆ.

- Advertisement -

ನಾವು ಉಚಿತ ವಿದ್ಯುತ್, ಪಡಿತರ, ಮಹಿಳೆಯರಿಗೆ ಹಾಗೂ ಯುವಕರಿಗೆ ಮಾಸಿಕ ಭತ್ಯೆ ನೀಡುತ್ತೇವೆ ಎಂದು ಹೇಳಿದ್ದೆವು. ಇದನ್ನೇ ಕಾಂಗ್ರೆಸ್ ಪಕ್ಷದವರು ಬಳಸಿಕೊಂಡು ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂದು ಟೀಕಿಸಿದರು

Join Whatsapp