ಆರಗ ಜ್ಞಾನೇಂದ್ರ ನಾಲಾಯಕ್ ಗೃಹಮಂತ್ರಿ: ಎಂ. ಲಕ್ಷ್ಮಣ್

Prasthutha|

ಮೈಸೂರು: ಆರಗ ಜ್ಞಾನೇಂದ್ರನಂತಹ ನಾಲಾಯಕ್ ಗೃಹಮಂತ್ರಿಯನ್ನು ರಾಜ್ಯ ಕಂಡಿರಲಿಲ್ಲ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಏಕವಚನದಲ್ಲೇ ವಾಗ್ದಾಳಿ ನಡೆಸಿದರು.

- Advertisement -

ಈ ಕುರಿತು ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಮ್ಮ ಇಲಾಖೆಯ ಸಿಬ್ಬಂದಿಯನ್ನು ಎಂಜಲು ನಾಯಿಗೆ ಹೋಲಿಸುವುದು ಎಷ್ಟು ಸರಿ. ಈ ಆರಗ ಜ್ಞಾನೇಂದ್ರ ಹುಚ್ಚು ನಾಯಿ. ಪೊಲೀಸ್ ವ್ಯವಸ್ಥೆಯನ್ನು ಕುಗ್ಗಿಸುವುದಕ್ಕೆ ಮುಂದಾಗಿದ್ದಾರೆ. ಎಲ್ಲ ವ್ಯವಸ್ಥೆಯಲ್ಲೂ ಭ್ರಷ್ಟಾಚಾರ ಮುಳುಗಿದೆ ಪೊಲೀಸ್ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡಿದ್ದೇ ಬಿಜೆಪಿ, ಕೂಡಲೇ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Join Whatsapp