ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿ ಅಬ್ದುಲ್ ಅಝೀಮ್ ಮುಂದುವರಿಕೆ

Prasthutha|

ಬೆಂಗಳೂರು: ಕರ್ನಾಟಕ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿ ಅಬ್ದುಲ್ ಅಝೀಮ್ ಬೆಂಗಳೂರು ಅವರನ್ನು ಮರು ಆಯ್ಕೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

- Advertisement -

ಈ ಕುರಿತು ರಾಜ್ಯಪಾಲರ ಪರವಾಗಿ ಸುತ್ತೋಲೆ ಹೊರಡಿಸಿರುವ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವಾಲಯದ ಅಧೀನ ಕಾರ್ಯದರ್ಶಿ ಮುಕ್ತಾರ್ ಪಾಷ ಹೆಚ್.ಹೆಚ್.ಜಿ, ತಕ್ಷಣದಿಂದ ಜಾರಿಗೆ ಬರುವಂತೆ ಅಝೀಮ್ ಅವರನ್ನು ಸರ್ಕಾರ ಮರು ಆಯ್ಕೆ ಮಾಡಿದೆ ಎಂದು ಪ್ರಕಟಿಸಿದ್ದಾರೆ.

ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರ ಅವಧಿ ಅಕ್ಟೋಬರ್ 14, 2022ಕ್ಕೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಸರ್ಕಾರ ಅಬ್ದುಲ್ ಅಝೀಮ್ ಅವರನ್ನೇ ಮರು ಆಯ್ಕೆ ಮಾಡಿದೆ.

Join Whatsapp