ಆಂಧ್ರಪ್ರದೇಶದ ನೂತನ ರಾಜ್ಯಪಾಲರಾಗಿ ಅಬ್ದುಲ್ ನಝೀರ್ ಪ್ರಮಾಣ ವಚನ ಸ್ವೀಕಾರ

Prasthutha|

ವಿಜಯವಾಡ: ಆಂಧ್ರಪ್ರದೇಶದ ನೂತನ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್’ನ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಅವರು ಶುಕ್ರವಾರ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

- Advertisement -


ಆಂಧ್ರಪ್ರದೇಶ ಹೈಕೋರ್ಟ್’ನ ಮುಖ್ಯನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು, ನಜೀರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.


ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ, ಅವರ ಪತ್ನಿ ವೈ.ಎಸ್ ಭಾರತಿ, ರಾಜ್ಯದ ಮಂತ್ರಿಗಳು ಹಾಗೂ ಹೈಕೋರ್ಟ್ನ ನ್ಯಾಯಮೂರ್ತಿಗಳು ಹಾಜರಿದ್ದರು.



Join Whatsapp