ಎ.ಸಿ.ಬಿ.ರದ್ದು: ಪಕ್ಷದ ಪ್ರಣಾಳಿಕೆ ಆಧರಿಸಿ ಮುಂದಿನ ಕ್ರಮ-ಮುಖ್ಯಮಂತ್ರಿ ಬೊಮ್ಮಾಯಿ

Prasthutha|

ಬೆಂಗಳೂರು: ಉಚ್ಛ ನ್ಯಾಯಾಲಯದ ಎ.ಸಿ.ಬಿ ರದ್ದುಗೊಳಿಸಿ ತೀರ್ಪು ನೀಡಿದೆ. ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ನೀಡಲಾಗಿರುವ ಭರವಸೆಯನ್ನು ಗಮನದಲ್ಲಿಟ್ಟುಕೊಂಡು, ಪ್ರಣಾಳಿಕೆ ಆಧರಿಸಿಯೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

- Advertisement -

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

 ತೀರ್ಪಿನ ಮೂಲ ಪ್ರತಿ ಪಡೆದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಅವರು ಹೇಳಿದರು.

Join Whatsapp