Home ಟಾಪ್ ಸುದ್ದಿಗಳು ದೇವಸ್ಥಾನದ ಪ್ರಸಾದ ಸೇವಿಸಿ ಸುಮಾರು 50 ಮಂದಿ ಅಸ್ವಸ್ಥ !

ದೇವಸ್ಥಾನದ ಪ್ರಸಾದ ಸೇವಿಸಿ ಸುಮಾರು 50 ಮಂದಿ ಅಸ್ವಸ್ಥ !

ಕೋಲಾರ: ದೇವಾಲಯದಲ್ಲಿ ವಿತರಿಸಿದ ಪ್ರಸಾದ ಸೇವಿಸಿ ಸುಮಾರು ಐವತ್ತು ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಬೀಗರಾಯನಹಳ್ಳಿಯಲ್ಲಿ ನಡೆದಿದೆ.

ಬೀರಗಾನಹಳ್ಳಿ ಗ್ರಾಮದ ಗಂಗಮ್ಮ ದೇವಾಲಯದಲ್ಲಿ ಹೊಸ ವರ್ಷಾಚರಣೆ ಪ್ರಯುಕ್ತ ವಿಶೇಷ ಪೂಜೆ, ಹೋಮ ಏರ್ಪಡಿಸಲಾಗಿತ್ತು. ಪೂಜೆಗೆ ಗ್ರಾಮಸ್ಥರು ಸೇರಿದಂತೆ ಅಕ್ಕಪಕ್ಕದ‌ ಗ್ರಾಮದ ನೂರಾರು ಮಂದಿ ಆಗಮಿಸಿದ್ದರು. ಪೂಜೆಯಾದ ಬಳಿಕ ಆಗಮಿಸಿದ್ದ ಜನರಿಗೆ ಕೇಸರಿಬಾತ್ ಹಾಗೂ ಚಿತ್ರಾನ್ನವನ್ನು ಪ್ರಸಾದವಾಗಿ ವಿತರಿಸಲಾಗಿದೆ. ಪ್ರಸಾದ ಸೇವಿಸಿ ಮನೆಗೆ ಹೋದ ಕೆಲ ಭಕ್ತರಿಗೆ ಸಂಜೆ ವೇಳೆಗೆ ವಾಂತಿ, ಭೇದಿ ಕಾಣಿಸಿಕೊಂಡಿದೆ. ಕೂಡಲೇ ಅಸ್ವಸ್ಥರನ್ನು ಪಕ್ಕದ‌ ಯಲ್ದೂರು ಸೇರಿದಂತೆ ಶ್ರೀನಿವಾಸಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ ಹಾಗೂ ಕೆಲವು ಖಾಸಗಿ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

Join Whatsapp
Exit mobile version