ಬೆಂಗಳೂರು: ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಪೊಲೀಸ್ ಅಧಿಕಾರಿ

Prasthutha|

ಬೆಂಗಳೂರು:  ಲಂಚ ಪಡೆಯುತ್ತಿದ್ದ ಚಿಕ್ಕಜಾಲ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ ರಾಘವೇಂದ್ರ ಎಸಿಬಿ(ಭ್ರಷ್ಟಾಚಾರ ನಿಗ್ರಹ ದಳ) ಬಲೆಗೆ ಬಿದ್ದಿದ್ದಾರೆ.

- Advertisement -

ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಫಲಕ ಕಿತ್ತು ಹಾಕಿರುವ ಕುರಿತು ಚಿಕ್ಕಜಾಲದ ನಿವಾಸಿಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ₹10 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪೊಲೀಸ್ ಅಧಿಕಾರಿ ರಾಘವೇಂದ್ರ, ₹8 ಲಕ್ಷವನ್ನು ಈ ಹಿಂದೆಯೇ ಪಡೆದಿದ್ದರು.

ಇಂದು (ಶನಿವಾರ) ₹2 ಲಕ್ಷ ಸ್ವೀಕರಿಸುವಾಗ ದಾಳಿ ನಡೆಸಿ ಲಂಚ ಹಣದ ಸಮೇತ ರಾಘವೇಂದ್ರ ಅವರನ್ನು ಬಂಧಿಸಲಾಗಿದೆ. ಹಣ ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ’ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp