ಬಸ್-ಸ್ವಿಫ್ಟ್ ಕಾರು ನಡುವೆ ಭೀಕರ ಅಪಘಾತ: ನವವದಂಪತಿ ಸೇರಿ ಮೂವರು ಸ್ಥಳದಲ್ಲೇ ಸಾವು

Prasthutha|

ಮಂಡ್ಯ: ಖಾಸಗಿ ಬಸ್​ ಹಾಗೂ ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ನವದಂಪತಿ ಸೇರಿದಂತೆ ಕಾರಿನಲ್ಲಿದ್ದ ಕೊಡಗು ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟು, ಐದು ಮಂದಿ ಗಂಭೀರ ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಕೆಂಪನಕೊಪ್ಪಲು ಗೇಟ್ ಬಳಿ ನಡೆದಿದೆ.

- Advertisement -

ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೊಡಗು ಜಿಲ್ಲೆ ಸೋಮವಾರಪೇಟೆ ಮೂಲದ ಸುದೀಪ್ (35), ಶ್ರೀಜಾ (30) ಹಾಗೂ ಸಂಗಮ್ಮ (55) ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಇನ್ನೊಬ್ಬ ಯುವತಿ (15) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮೈಸೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಖಾಸಗಿ ಬಸ್​’ನ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳನ್ನು ನಾಗಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಾಗಮಂಗಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ಳೂರು ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಮೈಸೂರು ಕಡೆಗೆ ಹೊಗುತ್ತಿದ್ದ ಕಾರು ನಡುವೆ ಕೆಂಪನಕೊಪ್ಪಲು ಗೇಟ್ ಬಳಿ ಅಪಘಾತ ನಡೆದಿದೆ. ಮೃತ ಸುದೀಪ್ ಹಾಗೂ ಶ್ರೀಜ ಮೂಲತಃ ಕೊಡಗಿನ ಕುಂದಳ್ಳಿ ಗ್ರಾಮದವರಾಗಿದ್ದು, ಕಳೆದ ಡಿಸಂಬರ್ 10 ರಂದು ಸೋಮವಾರಪೇಟೆಯಲ್ಲಿ  ವಿವಾವಹಿತರಾಗಿದ್ದರು..

Join Whatsapp