ಚಿಕ್ಕಬಳ್ಳಾಪುರ ಭೀಕರ ಅಫಘಾತಕ್ಕೆ 6 ಮಂದಿ ಬಲಿ

Prasthutha|

ಚಿಕ್ಕಬಳ್ಳಾಪುರ: ಲಾರಿ ಮತ್ತು ಜೀಪ್ ನಡುವೆ ಸಂಭವಿಸಿದ ನೇರ ಮುಖಾಮುಖಿಯಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ಸಮೀಪದ ಅಲವಾಟ ಗೇಟ್ ಬಳಿ ನಡೆದಿದೆ.

- Advertisement -

ಭಾನುವಾರ ಸಂಜೆ 4 ಗಂಟೆಗೆ ಈ ದುರ್ಷಟನೆ ನಡೆದಿದ್ದು, ಮೃತರ ಗುರುತು ಪತ್ತೆಯಾಗಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಜೀಪಿನಲ್ಲಿ 11 ಮಂದಿಯಿದ್ದು 4 ಮಂದಿ ಗಂಭೀರ ಗಾಯಗೊಂಡ ನಿಟ್ಟಿನಲ್ಲಿ ಚಿಂತಾಮಣಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಹೇಳಲಾಗುತ್ತಿದೆ.

ತಾಡಿಗೋಲ್ ನಿಂದ ಚಿಂತಾಮಣಿಗೆ ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ಜೀಪ್ ಗೆ, ಎದುರಿನಿಂದ ಅತೀವೇಗದಲ್ಲಿ ಬಂದ ಲಾರಿ ಡಿಕ್ಕಿಯಾದ ಹಿನ್ನೆಲೆಯಲ್ಲಿ ಜೀಪ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Join Whatsapp