ಕಾರು ಅಪಘಾತ: ಸರ್ಕಾರಿ ವೈದ್ಯಾಧಿಕಾರಿ ಸಾವು

Prasthutha|

ಮಡಿಕೇರಿ, ಆ.2: ಕಾರೊಂದು ಮರಕ್ಕೆ ಡಿಕ್ಕಿಯಾದ ಪರಿಣಾಮ ಸರ್ಕಾರಿ ವೈದ್ಯಾಧಿಕಾರಿಯೊಬ್ಬರು ಸಾವನ್ನಪ್ಪಿದ ಘಟನೆ ಸೋಮವಾರಪೇಟೆಯ ಚಿಲಾಕುಂದ ಬಳಿ ನಡೆದಿದೆ.

- Advertisement -


ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ರವೀಂದ್ರನ್ ಮೃತಪಟ್ಟವರು. ಅವರು ಸೋಮವಾರಪೇಟೆ ಆಸ್ಪತ್ರೆಗೆ ಇಂದು ಕರ್ತವ್ಯಕ್ಕೆ ಬರುತ್ತಿದ್ದ ವೇಳೆ ಕಾರು ಚಿಲಾಕುಂದ ಬಳಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಜೊತೆಯಲ್ಲಿ ಇದ್ದ ಸಹೋದರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಅವರ ಪತ್ನಿ ಮತ್ತು ಮಗು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ಇತ್ತೀಚೆಗಷ್ಟೇ ರವೀಂದ್ರನ್ ಅವರ ತಾಯಿ ಕೋವಿಡ್ ನಿಂದ ಮೃತಪಟ್ಟಿದ್ದರು.

Join Whatsapp